ರಾಜ್ಯಸಭಾ ಚುನಾವಣೆಯ ಸಮಯದಲ್ಲೇ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕಾಂಗ್ರೆಸ್ ಕಚೇರಿಗೆ ತೆರಳಿ ಎಡವಟ್ಟು ಮಾಡಿಕೊಂಡಿದ್ದಾರೆ.
![](https://rajnewskannada.in/wp-content/uploads/2022/06/image-145-1024x614.png)
ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಕಚೇರಿಗೆ ಪ್ರವೇಶಿಸುತ್ತಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ನೋಡಿ ಅಯ್ಯೋ ಎನ್ನುತ್ತಾ ವಾಪಸ್ ಬಂದಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಟಿ ರವಿ, ನಾನು ಆಕಸ್ಮಿಕವಾಗಿ ಕಾಂಗ್ರೆಸ್ ಪಕ್ಷದ ಕೊಠಡಿ ಪ್ರವೇಶಿಸಿದ್ದೆ.
![](https://rajnewskannada.in/wp-content/uploads/2022/06/image-144.png)
ಬಾಗಿಲಿನಲ್ಲೇ ಆ ಪಕ್ಷದ ನಾಯಕರನ್ನು ನೋಡಿ ವಾಪಸ್ ಆದೆ ಎಂದು ತಿಳಿಸಿದರು. ನಮ್ಮ ಇಬ್ಬರು ಅಭ್ಯರ್ಥಿಗಳು ಸುಲಭವಾಗಿ ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿ ಆಯ್ಕೆ ಸ್ವಲ್ಪ ಕಠಿಣವಾಗಿದೆ. ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ಇದನ್ನೂ ಓದಿ : – ಜೆಡಿಎಸ್ ಕಾಂಗ್ರೆಸ್ ಏನೇ ಪ್ರಯತ್ನ ಮಾಡಿದರೂ ಗೆಲುವು ಕಷ್ಟ – ಯಡಿಯೂರಪ್ಪ