ಬೆಂಗಳೂರಿನ ಜಯನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ (Basavarj bommai) ಭೇಟಿ ನೀಡಿದ್ರು. ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರ ಆಶೀರ್ವಾದ ಪಡೆದರು. ಬೆಂಗಳೂರಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಆಗಮನ ಹಿನ್ನೆಲೆಯಲ್ಲಿ ಸಿಎಂ ಭೇಟಿ ನೀಡಿದ್ದು, ರಾಘವೇಂದ್ರ ಸ್ವಾಮಿ ದರ್ಶನ ಪಡೆದುಕೊಂಡರು.
ರಾಘವೇಂದ್ರ ಸ್ವಾಮಿಗೆ ಸಿಸಿಎಂ (CM) ಆರತಿ ಬೆಳಗಿದರು. ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರನ್ನ (Subudendra Thirtha) ಭೇಟಿ ಮಾಡಿ, ಶ್ರೀಗಳಿಗೆ ಹಾರ ಹಾಕಿ ಸನ್ಮಾನಿಸಿದರು. ಇದನ್ನು ಓದಿ – ನನಗೂ ಸಚಿವನಾಗಬೇಕೆಂಬ ಆಸೆ ಇದೆ – ಶಾಸಕ ಅರವಿಂದ್ ಬೆಲ್ಲದ್
ಇದೇ ವೇಳೆ ಮಾತನಾಡಿದ ಸುಭುದೇಂದ್ರ ತೀರ್ಥ ಶ್ರೀಗಳು, ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸನ್ನಿಧಾನಕ್ಕೆ ಮುಖ್ಯಮಂತ್ರಿಗಳು ಬರಬೇಕು. ಮುಖ್ಯಮಂತ್ರಿಗಳು ನಮ್ಮ ಹಾವೇರಿ ಜಿಲ್ಲೆಯವರು. ಉತ್ತಮ ಸೇವೆ ಸಲ್ಲಿಸುತ್ತಾ ಕಾಮನ್ ಸಿಎಂ (Common CM) ಆಗಿದ್ದಾರೆ ಎಂದು ಸಿಎಂ ಬೊಮ್ಮಾಯಿಯನ್ನ ಗುಣಗಾನ ಮಾಡಿದರು.
ಸಚಿವ ವಿ.ಸೋಮಣ್ಣ ಮತ್ತು ಸಚಿವ ಆರ್. ಅಶೋಕ್ ಸಾಥ್ ಸಿಎಂಗೆ ಸಾಥ್ ನೀಡಿದರು. ಏ.10ರಿಂದ ಶ್ರೀರಾಮ ರಥಯಾತ್ರೆ ಮಾಡುತ್ತಿದ್ದೇವೆ ಎಂದು ಇದೇ ವೇಳೆ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಾದ್ಯಾಂತ 10 ಸಾವಿರ ಜನ ಭಾಗವಹಿಸಲಿದ್ದಾರೆ. ಏ.10ರಿಂದ ಪದ್ಮನಾಭನಗರದಿಂದ ರಥಯಾತ್ರೆ ಆರಂಭವಾಗಲಿದೆ. ರಾಮನನ್ನು ಪ್ರೀತಿಸುವವರು ಎಲ್ಲರೂ ಭಾಗವಹಿಸಬಹುದು ಎಂದು ಹೇಳಿದ್ದಾರೆ.