ಸಿಎಂ ಬೊಮ್ಮಾಯಿ ಕೊಟ್ಟ ಮಾತು ಉಳಿಸಿಕೊಳ್ಳಬೇಕು – ಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಈ ಹಿಂದೆ 712 ಕಿ.ಮೀ ಬಾಗಲಕೋಟೆಯಿಂದ ಬೆಂಗಳೂರುವರೆಗೆ ಪಾದಯಾತ್ರೆ ಮಾಡಿದ್ದೇವೆ. ನಮ್ಮ ಸಮಾಜಕ್ಕೆ ಮೀಸಲಾತಿ ಅನಿರ್ವಾತೆ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ಹಿಂದಿನ ಸಿಎಂ ಯಡಿಯೂರಪ್ಪ ಅಧಿವೇಶನದಲ್ಲಿ ಮಾತು ಕೊಟ್ಟಿದ್ದರು. ಈಗ ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬಸವರಾಜ ಬೊಮ್ಮಾಯಿ ಕೊಟ್ಟಮಾತು ಉಳಿಸಿಕೊಳ್ಳಬೇಕು. ಇದನ್ನೂ  ಓದಿ :- ಯಮುನೋತ್ರಿ ಹೆದ್ದಾರಿಯ ಭದ್ರತಾ ಗೋಡೆ ಕುಸಿತ – ಸಂಕಷ್ಟದಲ್ಲಿ 10 ಸಾವಿರ ಯಾತ್ರಾರ್ಥಿಗಳು

ಸಿಎಂ ಸ್ಥಾನಕ್ಕೆ ಮಧ್ಯಾಹ್ನ ರಾಜೀನಾಮೆ ಸಲ್ಲಿಕೆ: ಬಿ.ಎಸ್. ಯಡಿಯೂರಪ್ಪ ಘೋಷಣೆ |  Prajavani

ಬೆಳೆಗಾವಿ ಅಧಿವೇಶನದ ಅವಧಿಯಲ್ಲಿ ಬೊಮ್ಮಾಯಿ 3 ತಿಂಗಳ ಅವಕಾಶ ಕೇಳಿದ್ದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ನಮ್ಮ ಸಮುದಾಯದ ನಾಯಕರಿಗೆ ಮೀಸಲಾತಿ ಕೊಡುತ್ತೇನೆ ಎಂದು ಮಾತು ಕೊಟ್ಟಿದ್ದಾರೆ. ಏಪ್ರಿಲ್ 24 ಅಂತಿಮ ಗಡುವು ನೀಡಿದ್ದೇವು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಮೇ 23 ರಂದು ರಾಜ್ಯದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಹಾಗೂ ಬೊಮ್ಮಾಯಿ ನಿವಾಸದ ಮುಂದೆ ಸತ್ಯಾಗ್ರಹ ಮಾಡಲು ನಿರ್ಧಾರ ಮಾಡಲಾಗಿತ್ತು.

Karnataka BJP MLA Basanagouda Patil Yatnal announces free show of 'The  Kashmir Files' for a week | Deccan Herald

ರಾಜ್ಯದಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ 23ರಂದು ನಡೆಯುವ ಸತ್ಯಾಗ್ರಹ ಮುಂದೂಡಲಾಗಿದೆ. ಬರುವ ಜೂನ್ನಲ್ಲಿ ಇನ್ನೊಂದು ಸಭೆ ನಡೆಸಿ ಸತ್ಯಾಗ್ರಹವನ್ನು ಪ್ರಾರಂಭ ಮಾಡುವ ಕುರಿತಂತೆ ದಿನಾಂಕ ನಿಗದಿ ಮಾಡುತ್ತೇವೆ. ಬೊಮ್ಮಾಯಿ ಪಂಚಮಸಾಲಿ ಸಮುದಾಯದ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಶಿಗ್ಗಾಂವಿ ಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಕಣ್ಣೀರು ಹಾಕಿದ್ದೀರಿ. ಬಿಸಿರೊಟ್ಟಿ, ನವಣಕ್ಕಿ ಅನ್ನ ಕೊಟ್ಟಿದ್ದೀರಿ ಅಂತಾ ಹೇಳಿದ್ದೀರಿ. ಅದರ ಋಣ ತೀರಿಸಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ. ಕಳೆದ 2 ತಿಂಗಳಿನಿಂದ ಬೊಮ್ಮಾಯಿ ಮೌನವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ  ಓದಿ :- ನಾನು ಜೆಡಿಎಸ್ ನಿಂದ 1 ರೂಪಾಯಿ ತಗೋತಿಲ್ಲ – ಸಿ.ಎಂ.ಇಬ್ರಾಹಿಂ ಸ್ಪಷ್ಟನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!