ಮುಂದಿನ ವರ್ಷದಿಂದ ಕಾಮೆಡ್-ಕೆ (COMED- K) ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ (ASHWATH NARYAN) ಈ ಬಗ್ಗೆ ಮಾಹಿತಿ ನೀಡಿದ್ದರು. ಇದೀಗ ಅಶ್ವತ್ಥ್ ನಾರಾಯಣ್ ಹೇಳಿಕೆಗೆ ಕಾಮೆಡ್ –ಕೆ ವಿರೋಧ ವ್ಯಕ್ತಪಡಿಸಿದೆ.
ಏಕಪಕ್ಷೀಯ ನಿರ್ಧಾರಕ್ಕೆ ಕಾಮೆಡ್-ಕೆ ಕಾರ್ಯದರ್ಶಿ ಎಸ್.ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ನಮಗೆ ಮಾಹಿತಿಯೇ ನೀಡದೆಯೇ ಹೇಗೆ ಕಾಮೆಡ್-ಕೆ ವಿಲೀನ ಮಾಡ್ತಾರೆ..? ಈ ಕುರಿತು ನಮ್ಮೊಂದಿಗೆ ಯಾವುದೇ ಸಭೆ ನಡೆಸಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಪುನರ್ ಪರಿಶೀಲನೆ ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ : – ಗುತ್ತಿಗೆದಾರರ ಸಂಘದಿಂದ 40% ಕಮಿಷನ್ ಆರೋಪ- ದಾಖಲೆ ಸಲ್ಲಿಸುವಂತೆ ಕೆಂಪಣ್ಣಗೆ ಕೇಂದ್ರ ಗೃಹ ಕಚೇರಿಯಿಂದ ಕರೆ
ಇಲ್ಲವಾದಲ್ಲಿ ನಾವು ಕೋರ್ಟ್ ಮೊರೆ ಹೋಗ್ತೀವಿ ಅಂತ ಕಾಮೆಡ್-ಕೆ ನಿರ್ದೇಶಕರು ಹೇಳಿದ್ದಾರೆ. ಕಳೆದ 18 ವರ್ಷಗಳಿಂದ ದೇಶದಲ್ಲಿ ಕಾಮೆಡ್-ಕೆ ಇದೆ. ಪ್ರತಿ ವರ್ಷ 70 ಸಾವಿರ ಅಭ್ಯರ್ಥಿಗಳು ಕಾಮೆಡ್-ಕೆ ಪರೀಕ್ಷೆಗೆ ನೊಂದಣಿ ಮಾಡಿಕೊಳ್ತಾರೆ. 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮ್ಯಾನೇಜ್ಮೆಂಟ್ ಸೀಟ್ ನ ಅಡಿ ಇಂಜಿನಿಯರಿಂಗ್ (ENGINNERING) ಕೋರ್ಸ್ ಪ್ರವೇಶ ಪಡೆಯುತ್ತಾರೆ. ಏಕಾಏಕಿ ಕಾಮೆಡ್-ಕೆ ವಿಲೀನ ಅನ್ನೋದು ಎಷ್ಟು ಸರಿ..? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ