ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಲಿದ್ದಾರೆ – ಸತೀಶ್ ಜಾರಕಿಹೊಳಿ

ವಾಯುವ್ಯ ಶಿಕ್ಷಕರ, ಪದವೀಧರ ಚುನಾವಣೆಗೆ ಬಿರುಸಿನಿಂದ ಮತದಾನ ನಡೆಯುತ್ತಿದೆ. ಕಳೆದ ಎರಡು ಅವಧಿಗೆ ಬಿಜೆಪಿ ಶಿಕ್ಷಕರ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿತ್ತು. ಈ ಬಾರಿ ಖಂಡಿತವಾಗಿಯೂ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ರು.

ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ಅವರು ಪದವೀಧರ ಮತಕ್ಷೇತ್ರದಲ್ಲಿ ಪ್ರಯತ್ನ ಮಾಡ್ತಿದ್ದೇವೆ. ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಲು ಅವಕಾಶವಿದೆ. ಖಂಡಿತವಾಗಿ ಗೆಲ್ಲುತ್ತೇವೆ. 3 ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆಲ್ಲುತ್ತಾರೆ. ಪ್ರಕಾಶ್ ಹುಕ್ಕೇರಿ ಅವರಿಗೆ ಯಾರ ಸರ್ಟಿಫಿಕೇಟ್ ಬೇಕಾಗಿಲ್ಲ. ಬಿಜೆಪಿ, ಉಮೇಶ್ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ. ಇದನ್ನು ಓದಿ :-  ನಟ ಸಿದ್ದಾಂತ್ ಕಪೂರ್ ಡ್ರಗ್ಸ್ ತೆಗೆದುಕೊಂಡಿರೋದು ಸಾಬೀತು – ಡಿಸಿಪಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ

ಪ್ರಕಾಶ್ ಹುಕ್ಕೇರಿ 30 ವರ್ಷಗಳ ಕೆಲಸ ಮಾಡಿದ್ದಕ್ಕೆ ಜನರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಎಲ್ಲಾ ರಂಗದಲ್ಲೂ ಹುಕ್ಕೇರಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ. ನಾವು ಗಂಭೀರವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಈವರೆಗೂ ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಗೆದ್ದಿಲ್ಲ. ಈ ಬಾರಿ ಪ್ರಕಾಶ ಹುಕ್ಕೇರಿ ಗೆಲ್ಲುತ್ತಾರೆ ಎಂದು ತಿಳಿಸಿದ್ರು.

ಇದನ್ನು ಓದಿ :-  ಬೆಂಗಳೂರಿನಲ್ಲಿ ರೋಡಿಗಿಳಿಯಲಿದ್ದಾರೆ ಮಾರ್ಷಲ್ಸ್ – ಮಾಸ್ಕ್ ಕಡ್ಡಾಯಗೊಳಿಸಲು ಪಾಲಿಕೆ ನಿರ್ಧಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!