ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ – ಸಿಎಂ ಬೊಮ್ಮಾಯಿ ಗಂಭೀರ ಆರೋಪ..!

ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಜಾತಿ ಆಧಾರಿತವಾಗಿ ವೋಟ್ ಕೇಳುವ ಕಾಂಗ್ರೆಸ್ ಆಟ ಬಯಲಾಗಿದೆ.

ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಜಾತಿ ಆಧಾರಿತವಾಗಿ ವೋಟ್ ಕೇಳುವ ಕಾಂಗ್ರೆಸ್ ಆಟ ಬಯಲಾಗಿದೆ. ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಎಂದು ಸಿಎಂ ಬೊಮ್ಮಾಯಿ ( BASAVARAJ BOMMAI ) ವಾಗ್ದಾಳಿ ನಡೆಸಿದ್ದಾರೆ.

ತುಮಕೂರಿನ ಕುಣಿಗಲ್ ನಲ್ಲಿ ನಡೆದ ಬಿಜೆಪಿ ( BJP ) ಜನಸಂಕಲ್ಪ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ತಲೆದಿಂಬು ವಿತರಣೆಯಲ್ಲಿ ಅಕ್ರಮವಾಗಿದೆ. ಸಿದ್ದರಾಮಯ್ಯ ( SIDDARAMAIAH ) ಹೇಳುವ ಯಾವುದೂ ಸತ್ಯ ಆಗುವುದಿಲ್ಲ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಲ್ಲ ಅಂತಾ ಹೇಳಿದ್ದರು. ಆದರೆ ಇಬ್ಬರೂ ನಾಯಕರು ಮುಖ್ಯಮಂತ್ರಿ ಆದರು ಎಂದು ಹೇಳಿದರು.  ಇದನ್ನು ಓದಿ : –  ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ; ಅಮಿತ್ ಶಾ ಮಧ್ಯಪ್ರವೇಶಕ್ಕೆ ಆಗ್ರಹಿಸಿದ ಸುಪ್ರಿಯಾ ಸುಳೆ

ಜನಸಂಕಲ್ಪ ಯಾತ್ರೆ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಯಶಸ್ವಿಯಾಗಿ ನಡೆದಿದೆ. ಮೂರು ಬಾರಿ ಅರಳದ ಕಮಲ ಈ ಬಾರಿ ಕುಣಿಗಲ್ನಲ್ಲಿ ಗೆದ್ದು ಕಮಲ ಅರಳಿಸಲಿದೆ. ಹೋದ ಎಲ್ಲ ಕಡೆಯೂ ಜನಸಂಕಲ್ಪಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಕಾರ್ಯಗಳಿಂದ ಜನ ಸ್ಪಂದನೆ ನೀಡುತ್ತಿದ್ದಾರೆ. ತುಮಕೂರಿನಲ್ಲಿ ಬಿಜೆಪಿಯ ಗಾಳಿ ಬೀಸುತ್ತಿದೆ. ಕೆಲ ಕ್ಷೇತ್ರಗಳಲ್ಲಿ ನಾವು ಕಳೆದ ಬಾರಿ ಕಡಿಮೆ ಅಂತರದಿಂದ ಸೋತಿದ್ದೇವೆ. ಬರೆದಿಟ್ಟುಕೊಳ್ಳಿ ಈ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಸಾಕಷ್ಟು ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಜನರಿಗೆ ಸುಳ್ಳು ಹೇಳಿಕೊಂಡು ಬಂತು. ಈಗ ಕಾಂಗ್ರೆಸ್ ನ ಆಟ ಬಯಲಾಗಿದೆ ಎಂದರು.

ಇದನ್ನು ಓದಿ : –   ನಾಯಿ ಕಡಿತದ ರೇಬೀಸ್ ಕಾಯಿಲೆ 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ – ಸಚಿವ ಸುಧಾಕರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!