ದೇವನಹಳ್ಳಿ ಬಳಿಯ ರೆಸಾರ್ಟ್ ನಲ್ಲಿ ಇಂದು ಮತ್ತು ನಾಳೆ ಕಾಂಗ್ರೆಸ್ ( CONGRESS )ಪಕ್ಷದ ಪದಾಧಿಕಾರಿಗಳಿಗೆ ಎರಡು ದಿನಗಳ ‘ನವ ಸಂಕಲ್ಪ ಶಿಬಿರ‘ ಆಯೋಜಿಸಲಾಗಿದೆ. ರಾಜಸ್ತಾನದ ಉದಯಪುರದಲ್ಲಿ ಇತ್ತೀಚಿಗೆ ಎಐಸಿಸಿ ಚಿಂತನ್ ಶಿವರ್ ಆಯೋಜಿಸಿತ್ತು. ಅದೇ ಮಾದರಿಯಲ್ಲಿ ಶಿಬಿರ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಜೂನ್ 3 ರಂದು ನಡೆಯಲಿರುವ ಎಂಎಲ್ಸಿ ( MLC ) ಚುನಾವಣೆ ಮತ್ತು ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಹಾಗೂ ರಾಜ್ಯ ಕಾಂಗ್ರೆಸ್ ಘಟಕದೊಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಕಾರ್ಯಾಗಾರದಲ್ಲಿ ಹಣದುಬ್ಬರದಿಂದ ಸಾಮಾಜಿಕ ನ್ಯಾಯದವರೆಗೆ ಆರೋಗ್ಯ ಮತ್ತು ಶಿಕ್ಷಣದವರೆಗೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಉದ್ದೇಶಿಸಲಾಗಿದೆ. ಹಾಲಿ ಹಾಗೂ ಮಾಜಿ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಸುಮಾರು 500 ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ : – ಇಂದು ನಾಳೆ ಕೈ ಶಿಬಿರದಲ್ಲಿ ನಡೆಯಲಿದೆ ಚಿಂತನ ಮಂಥನ