ಸಿದ್ದರಾಮಯ್ಯ (Siddaramaiah) ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪು ಬೆಂಬಲಿಸಿ RSS ಬೈಯ್ಯುವುದೇ ಸಿದ್ದರಾಮಯ್ಯನ ಕಾಯಕ. ಕಾಂಗ್ರೆಸ್ (Congress) ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish shetter) ವಿಪಕ್ಷನಾಯಕ ವಿರುದ್ದ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಾಸಕ ಸಿ.ಟಿ.ರವಿ (CT.Ravi) ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ..? ಎನ್ನುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ ಎಂಬ ಸಿ.ಟಿ.ರವಿ ಹೇಳಿಕೆಯನ್ನು ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಮೋದಿ ಸರ್ಕಾರ ಬಂದ ನಂತರ ಕೋಮು ಗಲಭೆಗಳು ನಿಂತಿವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದೂ ಮುಸ್ಲಿಂ ಗಲಭೆ ಇರತ್ತೆ, ಹೀಗಾಗಿ ಸಿಟಿ ರವಿ ಆ ರೀತಿ ಹೇಳಿದ್ದಾರೆ ಎಂದು ಹೇಳಿದರು.
ಒಕ್ಕಲಿಗರ ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK.Shivakumar) ಮುಂದಿನ ಮುಖ್ಯಮಂತ್ರಿಯಾಗುವ ಆಸೆ ತೋರ್ಪಡಿಸಿರುವ ವಿಚಾರವಾಗಿ ಮಾತನಾಡಿದ ಅವರು ಅಧಿಕಾರದ ಲಾಲಸೆಗೆ ಡಿಕೆ ಶಿವಕುಮಾರ್ ವೇದಿಕೆ ದುರುಪಯೋಗ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕಾಗಿ ಯಾವ ವೇದಿಕೆಯನ್ನಾದರೂ ದುರಪಯೋಗ ಮಾಡಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದರು. ಕರ್ನಾಟಕದಲ್ಲಿ ಸಿದ್ದರಾಮಯ್ಯ ನಿಂದ ಕಾಂಗ್ರೆಸ್ ನಿರ್ನಾಮಮವಾಗುತ್ತೆ. ಪಂಜಾಬ್ ನಲ್ಲಿ ಸಿದ್ದು ಗಲಾಟೆಯಿಂದ ಕಾಂಗ್ರೆಸ್ ನಿರ್ನಾಮಮವಾಯ್ತು. ಕರ್ನಾಟಕದಲ್ಲಿ ಕಾಂಗ್ರೆಸ್, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಜಗಳದಿಂದ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದ್ರು. ಸಿದ್ದರಾಮಯ್ಯ ಅಧಿಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಧಾರವಾಡಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಕುಂಕುಮ, ತಿಲಕವಿಟ್ಟವರನ್ನು ನೋಡಿದರೆ ಹೆದರಿಕೆ ಆಗುತ್ತೆ ಎಂದಿದ್ದರು. ತಮ್ಮ ಅಧಿಕಾರವಧಿಯಲ್ಲಿ PFI ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದರು ಎಂದು ತಿಳಿಸಿದ್ರು. ಇದನ್ನೂ ಓದಿ : – ವಾಂಟೆಡ್ ಲಿಸ್ಟ್ ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ! – ಟ್ವೀಟ್ ಮೂಲಕ ಬಿಜೆಪಿ ಕಾಳೆಲೆದ ಕಾಂಗ್ರೆಸ್
ಸಿ.ಟಿ.ರವಿ ನಿವಾಸಕ್ಕೆ ಕಾಂಗ್ರೆಸ್ಸಿಗರು ಮುತ್ತಿಗೆ ಹಾಕುವ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ಮನೆಗಳಿಗೂ, ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಬಹುದು. ಆದರೆ ಆ ಸಂಸ್ಕೃತಿ ನಮ್ಮದಲ್ಲ. ಹೀಗಾಗಿ ಸಿದ್ದರಾಮಯ್ಯ ಪಟಾಲಂ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಎಂದು ಎಚ್ಚರಿಕೆ ನೀಡಿದ್ರು.
ಇದನ್ನೂ ಓದಿ : – ಬಿಜೆಪಿಯವರು ಯಾರ ಮನೆ ಬಾಗಿಲನ್ನೂ ಕೂಡ ಕಾಯಬೇಕಿಲ್ಲ – ಅಶ್ವತ್ಥ್ ನಾರಾಯಣ್