ಬೆಂಗಳೂರು ಹೊರವಲಯದಲ್ಲಿ ಅಂತರಾಷ್ಟ್ರೀಯ ಮಟ್ಟದ ಪಾರ್ಕ್ ನಿರ್ಮಾಣ – ಸಚಿವ ಮುನಿರತ್ನ

ಬೆಂಗಳೂರಿಗೆ ಶುದ್ಧ ಗಾಳಿಯ ಅಗತ್ಯವಿದೆ. ಮುಂದಿನ ಶುಕ್ರವಾರ ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ನಕ್ಷೆ ತಯಾರಿಸಿ ತರುತ್ತಾರೆ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ಗಳಿಗಿಂತ ದೊಡ್ಡ ಪಾರ್ಕ್ ನಿರ್ಮಾಣ ಸಂಬಂಧದ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಈಗ ದೊಡ್ಡ ಪಾರ್ಕ್ ಗೆ ಸ್ಥಳ ಗುರುತಿಸುವಿಕೆ ಬಗ್ಗೆ ಚರ್ಚೆ ಮಾಡಿದ್ದೆವೆ. ಬನ್ನೇರುಘಟ್ಟ ಬಳಿ ಹಾಗೂ ದೊಡ್ಡಬಳ್ಳಾಪುರದ ರಸ್ತೆಯಲ್ಲಿ ಸ್ಥಳವನ್ನು ಗುರುತಿಸಲಾಗ್ತಿದೆ. 400 ಎಕರೆ ಜಾಗದ ಅವಶ್ಯಕತೆ ಪಾರ್ಕ್ ನಿರ್ಮಾಣಕ್ಕೆ ಬೇಕಾಗಿದೆ . ಇದನ್ನೂ ಓದಿ : – ಬೇಲ್ ಮೇಲೆ ಹೊರಗಿರೋ ಹುಡುಗ ನನ್ನ ಪ್ರಾಮಾಣಿಕತೆ ಪ್ರಶ್ನಿಸ್ತಾನೆ – ನಲಪಾಡ್ ವಿರುದ್ಧ ರಮ್ಯಾ ಟ್ವೀಟ್ ಸಮರ

ಅಂತರಾಷ್ಟ್ರೀಯ ಮಟ್ಟದಲ್ಲಿ ಆ ಪಾರ್ಕ್ ನಿರ್ಮಾಣ ಮಾಡುವ ಗುರಿಯಿದೆ. ಆ ಪಾರ್ಕ್ ಹೆಸರು ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಂತ ಹೆಸರಿಡಲು ನಿರ್ಧರಿಸಿದ್ದೆವೆ. ಜಾಗ ನಮ್ಮ ವಶಕ್ಕೆ ಬಂದ ನಂತರ ವೆಚ್ಚದ ಅಂದಾಜು ನಮಗೆ ಗೊತ್ತಾಗುತ್ತೆ .350 ಎಕರೆಯಲ್ಲಿ ಪಾರ್ಕ್ ನಿರ್ಮಾಣ ಮಾಡುವ ಉದ್ದೇಶ ನಮಗಿದೆ.

ಪ್ರಾಥಮಿಕ ವೆಚ್ಚಗಳಿಗೆ ಹತ್ತು ಕೋಟಿ ರೂ ಇದೆ ಡಿಪಿಆರ್ ನಂತರ. ವೆಚ್ಚದ ನಿರ್ಧಾರ ಆಗುತ್ತದೆ ಈ ಪಾರ್ಕ್ ನಿರ್ಮಾಣಕ್ಕೆ ಅನುದಾನದ ಕೊರತೆ ಆಗಲ್ಲ. ಇದು ಅರಣ್ಯ ಇಲಾಖೆಯ ಜಾಗವಾಗಿದ್ದು ಆಗಸ್ಟ್ 15 ರೊಳಗೆ ಪಾರ್ಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಇದನ್ನೂ ಓದಿ : – ಬಿಜೆಪಿಯವರೇ ನಿಮ್ಮ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದೆ ಅದನ್ನ ನೋಡಿಕೊಳ್ಳಿ – ಪ್ರಿಯಾಂಕ್ ಖರ್ಗೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!