ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ ಅವಾಂತರ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಕಾಫಿ ನಾಡು ಚಿಕ್ಕಮಗಳೂರಿನ ಮಲೆನಾಡು ( malenadu ) ಭಾಗದಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದ್ದು ತಾಲೂಕಿನ ಖಾಂಡ್ಯ ಹೋಬಳಿಯ ಪರದೇಶಪ್ಪನಮಠಕ್ಕೂ ಮಳೆ ನೀರು ನುಗ್ಗಿದೆ.

ಕಾಫಿ ನಾಡು ಚಿಕ್ಕಮಗಳೂರಿನ ಮಲೆನಾಡು ( malenadu ) ಭಾಗದಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದ್ದು ತಾಲೂಕಿನ ಖಾಂಡ್ಯ ಹೋಬಳಿಯ ಪರದೇಶಪ್ಪನಮಠಕ್ಕೂ ಮಳೆ ನೀರು ನುಗ್ಗಿದೆ. ನದಿಗಳು ಉಕ್ಕಿ ಹರಿದ ಪರಿಣಾಮ ಹಲವು ಸೇತುವೆಗಳು ಮುಳುಗಡೆಯಾಗಿದ್ದು ತೋಟಗಳಿಗೆ ನೀರು ನುಗ್ಗಿದೆ. ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಬಳ್ಳಾಪುರ – ಜಿಲ್ಲೆಯ ಗುಡಿಬಂಡೆ ತಾಲೂಕಿನ ಸುತ್ತಮುತ್ತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಗುಡಿಬಂಡೆಯ ಅಮಾನಿಬೈರಸಾಗರ ಕೆರೆ ಕೋಡಿ ಹರಿದಿದ್ದು ಇದರಿಂದ ಗುಡಿಬಂಡೆ ಪಟ್ಟಣಕ್ಕೆ ಸಂಪರ್ಕಿಸುವ ಮಾರ್ಗ ಬಂದ್ ಆಗಿದೆ. ಇನ್ನೂ ಕೆರೆ ಕೋಡಿ ಮೇಲೆ ವಾಹನಗಳು ಸಂಚರಿಸಲಾಗದೆ ಪರದಾಟ ಅನುಭವಿಸುವಂತಾಯಿತು. ಬಸ್ ಗಳು ಕಾರುಗಳು ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಿದ್ದು ಗುಡಿಬಂಡೆ ಯಿಂದ ಬೇರೆ ಬೇರೆ ಊರುಗಳಿಗೆ ತೆರಳಲಾಗದೆ ಪರದಾಟ ಉಂಟಾಗಿದೆ. ಕೆರೆ ಕೋಡಿ ಮೇಲೆ ಸೇತುವೆ ಕಟ್ಟುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ :- ರಾಹುಲ್ ಗಾಂಧಿಗೆ ಬಾಡಿ ಫಿಟ್ನೆಸ್ ಇದ್ದರೂ ದೇಶವಾಳಲು ಮೈಂಡ್ ಫಿಟ್ನೆಸ್ ಇದ್ಯಾ? ಶೋಭಾ ಕರಂದ್ಲಾಜೆ ಪ್ರಶ್ನೆ


ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕಾದಲವೇಣಿ ಗ್ರಾಮದ ಬಳಿ ಕುಮದಾವತಿ ನದಿಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಹೋಗಿರುವ ಘಟನೆ ನಡೆದಿದೆ.. ರಮಾಪುರ ಗ್ರಾಮದ ಕೃಷ್ಣಪ್ಪ ಎನ್ನುವ ವ್ಯಕ್ತಿ ಕೊಚ್ಚಿಹೋಗಿದ್ದು, ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ ಕೃಷ್ಣಪ್ಪ ನನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.. ರಭಸದಿಂದ ಹರಿಯುವ ನದಿ, ಹಳ್ಳ ಕೊಳ್ಳಗಳಲ್ಲಿನ ನೀರಿನಲ್ಲಿ ಇಳಿಯದಂತೆ ಎಚ್ಚರ ವಹಿಸುವಂತೆ ಸ್ಥಳೀಯ ಮುಖಂಡರು ತಿಳಿಸಿದ್ದಾರೆ.

 ಇದನ್ನೂ ಓದಿ :- ಶಿವಾನಂದ ವೃತ್ತದ ಮೇಲೆ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ‘ಪುನೀತ್ ರಾಜ್ ಕುಮಾರ್’ ಹೆಸರಿಡಿ – ಎನ್.ಆರ್.ರಮೇಶ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!