ಕೋವಿಡ್ ಬಂದರೂ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗಿಲ್ಲ: ಎಂ ಪಿ ರೇಣುಕಾಚಾರ್ಯ

ಬೆಂಗಳೂರು: ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಹಿಂದೆ ಪರಿಹಾರ ಕೊಟ್ಟರು, ಕೋವಿಡ್ ಬಂದರೂ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗಿಲ್ಲ. ಕ್ಷೇತ್ರಗಳ ಅಭಿವೃದ್ಧಿಗೂ ಹಣ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಬಿಟ್ಟಿ ಪ್ರಚಾರಕ್ಕಾಗಿ ಟೀಕೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ಮಾಧ್ಯಮಗಳೊಂದಿಗೆ ಮಾತಣಾಡಿದ ಅವರು, ಕಾಂಗ್ರೆಸ್ ನಾಯಕರು ಸಲಹೆ ಕೊಡಲಿ, ಮುಖ್ಯಮಂತ್ರಿ ರಾಜೀನಾಮೆ ಕೇಳುವುದು ಸರಿಯಲ್ಲ.
ರಾಜಕಾರಣ ಇಂಥ ಸಂದರ್ಭದಲ್ಲಿ ಮಾಡುವುದು ಬೇಡ, ಪ್ರತಿಪಕ್ಷಗಳು ಸಲಹೆ ಕೊಡಲಿ ಚುನಾವಣೆ ಬಂದಾಗ ರಾಜಕೀಯ ಮಾಡಿ, ಈಗ ಬೇಡ ಎಂದರು.

ಇನ್ನೂ ಸಚಿವ ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಅವರುಗಳು ಕೇಂದ್ರದ ನಾಯಕರನ್ನು ಭೇಟಿ ಮಾಡಿದ್ದು ಕೋವಿಡ್ ವಿಚಾರಕ್ಕೆ ಮಾತ್ರ, ಕೋವಿಡ್ ನಿರ್ವಹಣೆ ವಿಚಾರಕ್ಕೆ ಕೇಂದ್ರಕ್ಕೆ ತೃಪ್ತಿ ಇದೆ. ನಾಯಕತ್ವ‌ ಬದಲಾವಣೆ‌ ಆಗುತ್ತೆ ಅನ್ನೋದೆಲ್ಲ ಸತ್ಯಕ್ಕೆ ದೂರವಾದ ವಿಷಯ. ಜನರನ್ನು ಸಂಕಷ್ಟದಿಂದ ಪಾರು ಮಾಡಲು ಸಿಎಂ ಪ್ರಯತ್ನ ಪಡುತ್ತಿದ್ದಾರೆ ಎಂದು ತಿಳಿಸಿದರು.

ಇನ್ನೂ ದೆಹಲಿಗೆ ಹೋಗಿ ದೂರು ಕೊಡುವವರು ಆತ್ಮಾವಲೋಕನ ಮಾಡಿಕೊಳ್ಳಲಿ, ಮಂತ್ರಿ ಆದೋರು ಇಂತಹ ವೇಳೆ ಕ್ಷೇತ್ರದಲ್ಲಿದ್ದು ಕೆಲಸ ಮಾಡಬೇಕು. ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಸಚಿವ ಸಿ ಟಿ ಯೋಗೇಶ್ವರ್​​ಗೆ ಪರೋಕ್ಷವಾಗಿ ಟಾಂಗ್​​ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!