ಧಾರವಾಡದ ಬಾಡಾ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
![](https://rajnewskannada.in/wp-content/uploads/2022/05/Capture-25.png)
ಇಂದು ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ.
![](https://rajnewskannada.in/wp-content/uploads/2022/05/Capture3-1.png)
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬೆನ್ನಲ್ಲೇ ಕ್ರೂಸರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ :- ಗಣಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂಕೋರ್ಟ್ ..!