ಕಾಶಿಯ ಜ್ಞಾನವಾಪಿ ಮಸೀದಿಯ ವಿವಾದದ ನಡುವೆ ಇದೀಗ ಮಂಗಳೂರಿನ ಮಳಲಿ ಮದನಿ ದರ್ಗಾದ ವಿವಾದದ ಕಾವು ಹೆಚ್ಚಿದೆ. ಇಲ್ಲಿ ಹಿಂದೂ ದೇವಾಲಯ ಇತ್ತು ಅನ್ನೋ ಕುರುಹುಗಳು ಪತ್ತೆಯಾಗಿದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದು, ಸ್ಥಳ ಇತಿಹಾಸಕ್ಕೆ ತಾಂಬೂಲ ಪ್ರಶ್ನೆಗೂ ಮುಂದಾಗಿದೆ.
![](https://rajnewskannada.in/wp-content/uploads/2022/05/image-6.png)
ಈ ಹಿನ್ನೆಲೆಯಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆದಿದೆ. ಹಿಂದೂಪರ ಸಂಘಟನೆಗಳ ನೇತ್ರತ್ವದಲ್ಲಿ ವಿವಾದಿತ ಮಳಲಿ ದರ್ಗಾದ ಅನತಿ ದೂರದಲ್ಲೇ ಇಂದು ಬೆಳಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನೆ ನಡೆದಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಗಿದೆ. ತಳಿರು ತೋರಣಗಳಿಂದ ಭಜನಾ ಮಂದಿರವನ್ನು ಶೃಂಗಾರಗೊಳಿಸಲಾಗಿದ್ದು, ಭಜನಾ ಮಂದಿರದ ಮುಂಭಾಗ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇರಳ ಮೂಲದ ಪೊದುವಾಲ್ರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಮಸೀದಿ ಸುತ್ತಮುತ್ತ ದೈವಿ ಶಕ್ತಿ ಇದ್ಯಾ ಎಂಬ ಬಗ್ಗೆ ಪ್ರಶ್ನೆ ಕೇಳಲಾಗುವುದು. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ ದೈವೀ ಶಕ್ತಿ ಪತ್ತೆ ಹಚ್ಚಲಾಗುವುದು ಹಿಂದೂಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. ಇದನ್ನೂ ಓದಿ :- ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣ – ವಿಚಾರಣೆ ಮೇ 26ಕ್ಕೆ ಮುಂದೂಡಿದ ಜಿಲ್ಲಾ ಕೋರ್ಟ್
![](https://rajnewskannada.in/wp-content/uploads/2022/05/image-7-1024x576.png)
ತಾಂಬೂಲ ಪ್ರಶ್ನೆ ನಡೆಯಲಿರುವ ಭಜನಾ ಮಂದಿರದ ಸುತ್ತ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿವಾದಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಮೂಲಕ ಕ್ರಮವಹಿಸಲಾಗಿದೆ. ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 2 ಎಸಿಪಿ, 7 ಇನ್ಸ್ಪೆಕ್ಟರ್, 12 ಪಿಎಸ್ಐ, 10 ಎಎಸ್ಐ, 120 ಸಿವಿಲ್ ಸ್ಟಾಪ್ ಹಾಗೂ 3 ಕೆಎಸ್ಆರ್ಪಿ ತುಕಡಿ, 3 ಸಿಎಆರ್ ತುಕಡಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ವಿವಾದಿತ ದರ್ಗಾದ ಸ್ಥಳದಲ್ಲೂ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ದರ್ಗಾ 500 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ :- ಸಾಮಾನ್ಯ ಕಾರ್ಯಕರ್ತರಿಗೆ ಹೈಕಮಾಂಡ್ ಟಿಕೆಟ್ ನೀಡಿರೋದು ಸಂತಸ ತಂದಿದೆ – ಸತೀಶ್ ಜಾರಕಿಹೊಳಿ