ಕೋವಿಡ್ ತಡೆಗೆ ರಾಮನಗರ ಜಿಲ್ಲಾಡಳಿತಕ್ಕೆ ಮೂರು ಅಂಶದ ಸೂತ್ರ ಸೂಚಿಸಿದ ಡಿಸಿಎಂ ‌ಅಶ್ವತ್ಥನಾರಾಯಣ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೋವಿಡ್‌ ಸೋಂಕನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಮೂರು ಅಂಶಗಳ ಸೂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಸೂಚಿಸಿದ್ದು, ಅದರ ಪ್ರಕಾರ ಅತ್ಯಂತ ಕ್ರಮಬದ್ಧವಾಗಿ ಕೋವಿಡ್‌ ಸ್ಥಿತಿಯನ್ನು ನಿರ್ವಹಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಜಿಲ್ಲೆಯ ಸಂಸದರು, ಶಾಸಕರು, ಎಲ್ಲ ಚುನಾಯಿತ ಪ್ರತಿನಿಧಿಗಳ, ಉನ್ನತ ಅಧಿಕಾರಿಗಳನ್ನು ಒಳಗೊಂಡ ವರ್ಚುವಲ್‌ ಸಭೆಯ ಮೂಲಕ ಜಿಲ್ಲೆಯ ಕೋವಿಡ್‌ ಪರಿಸ್ಥಿತಿಯನ್ನು ಅವಲೋಕನ ಮಾಡಿದ ಅವರು, ಕ್ಷಿಪ್ರವಾಗಿ ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್‌ ಪರೀಕ್ಷೆ ಮಾಡುವುದು, ಕ್ಷಿಪ್ರವಾಗಿ ಫಲಿತಾಂಶ ನೀಡುವುದು ಹಾಗೂ ಪಾಸೀಟಿವ್‌ ಬಂದರೆ ಅಷ್ಟೇ ಕ್ಷಿಪ್ರವಾಗಿ ಚಿಕಿತ್ಸೆ ಆರಂಭಿಸುವ ಮೂರು ಅಂಶಗಳ ಸೂತ್ರವನ್ನು ಸೂಚಿಸಿದರು.

ಇದರ ಜತೆಗೆ, ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸುವಂತೆ ಸೂಚಿಸಿದರು. ಸರಕಾರದ ಮಾರ್ಗಸೂಚಿಯಂತೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ತಪ್ಪದೇ ಲಸಿಕೆ ಕೊಡಬೇಕು. ಅದಕ್ಕೆ ಬೇಕಾದ ಎಲ್ಲ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜ್ವರ, ಶೀತ ಇದ್ದರೆ ಕೋವಿಡ್‌ ಪರೀಕ್ಷೆ ಮಾಡಿ :

ಯಾರಿಗೆ ಆಗಲಿ ಜ್ವರ, ಶೀತ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳಿದ್ದರೆ ಕೂಡಲೇ ಅಂಥವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಅಥವಾ ಅಂಥವರು ಯಾರಾದರೂ ಇದ್ದರೆ ನಿರ್ಲಕ್ಷ್ಯ ಮಾಡದೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಲ ಗಂಟೆಗಳಲ್ಲೇ ವರದಿ ಕೊಡುವುದರ ಜತೆಗೆ, ಯಾವುದೇ ವ್ಯಕ್ತಿಗೆ ಕೋವಿಡ್‌ ಪಾಸಿಟಿವ್‌ ಅಂತ ಗೊತ್ತಾದ ತಕ್ಷಣವೇ ಚಿಕಿತ್ಸೆ ಶುರು ಮಾಡಬೇಕು. ಸಿಮ್‌ಟ್ಯಾಮಿಕ್‌ ಅಥವಾ ಎ ಸಿಮ್‌ಟ್ಯಾಮಿಕ್‌ ಅಂತ ವಿಂಗಡಣೆ ಮಾಡುವುದು ಬೇಡ. ಸೋಂಕು ಬಂದ ತಕ್ಷಣ ಚಿಕಿತ್ಸೆ ನೀಡಿದರೆ ರೋಗವು ಉಲ್ಬಣ ಸ್ಥಿತಿಗೆ ಹೋಗುವುದಿಲ್ಲ. ಆಗ ಆಸ್ಪತ್ರೆ, ಐಸಿಯು, ಆಕ್ಸಿಜನ್‌ ಮುಂತಾದವು ಬೇಕಾಗುವುದಿಲ್ಲ. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸೂತ್ರದಂತೆ ಕೆಲಸ ಮಾಡಿದರೆ ಮಾಡಿದರೆ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಆಗ ಮಾತ್ರ ಯಾವುದೇ ಸಾವು-ನೋವು ಉಂಟಾಗುವುದಿಲ್ಲ. ಇದನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!