ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ.
![ಮಸೀದಿಗಳ ಮುಂದೆ ಕ್ಯಾಮೆರಾ ಅಳವಡಿಸುವಂತೆ ಓವೈಸಿ ಕರೆ – Public TV](https://publictvin.b-cdn.net/wp-content/uploads/2020/11/mosque-loudspeakers.jpg)
ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ ಸದಸ್ಯರು ಬೆಳಗ್ಗಿನ ಜಾವ ದೇವಸ್ಥಾನ ಮತ್ತು ಮಠದ ಮೈಕ್ನಲ್ಲಿ ಸುಪ್ರಭಾತ, ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಹಾಕುವಂತೆ ಮನವಿ ಪತ್ರ ನೀಡುತ್ತಿದ್ದಾರೆ.
ಇದನ್ನೂಓದಿ : – ಮೇ 21ಕ್ಕೆ ನಿಗದಿಯಂತೆ ನಡೆಯಲಿದೆ ನೀಟ್ ಪಿಜಿ ಪರೀಕ್ಷೆ