ರಾಜ್ಯ ಒಕ್ಕಲಿಗ ರ ಸಂಘದ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK.Shivakumar) ಸಮುದಾಯದ ಆಶೀರ್ವಾದ ನನ್ನ ಮೇಲಿರಲಿ. ವಿಧಾನಸೌಧ (Vidhanasoudha) ಕ್ಕೆ ತೆಗೆದುಕೊಂಡು ಹೋಗಿ ಕೂರಿಸುವ ತಾಕತ್ತಿದೆ. ನಿಮ್ಮ ಶಕ್ತಿ ಉತ್ಸಾಹ ನೋಡಿದರೆ ಹಾಗೆ ಅನ್ನಿಸುತ್ತಿದೆ.
ನಿಮ್ಮ ಮನೆಯ ಬಾಗಿಲಿಗೆ ಬಂದಿರುವ ಅವಕಾಶವನ್ನು ಕಳೆದುಕೊಳ್ಳಬೇಡಿ. ಕೈಲಿ ಅಧಿಕಾರವಿಲ್ಲದಿದ್ದರೆ ಏನೂ ಮಾಡಲು ಆಗುವುದಿಲ್ಲ. ನನ್ನ ಕಷ್ಟ ಕಾಲದಲ್ಲಿ ಸಮುದಾಯ ಬೆನ್ನಿಗೆ ನಿಂತಿತ್ತು. ನಾನು ಜೈಲಿಗೆ ಹೋದಾಗಲೂ ನನ್ನ ಜತೆಗೆ ನಿಂತಿದ್ದಿರಿ. ಇನ್ನಷ್ಟು ಗಟ್ಟಿ ಧ್ವನಿಯಲ್ಲಿ ಮಾತಾಡಲು ಶಕ್ತಿ ನೀಡಿದ್ದೀರಿ. ನನ್ನ ಮೇಲೆ ಸಮುದಾಯದ ಋಣ ಇದೆ, ಆ ಋಣ ತೀರಿಸಬೇಕಿದೆ ಎಂದರು. ಈ ಮೂಲಕ ಮತ್ತೆ ಸಿಎಂ ಹಾಗೂ ಆಸೆ ವ್ಯಕ್ತಪಡಿಸಿದರು.
ಒಕ್ಕಲಿಗ ಸಮುದಾಯ ದೊಡ್ಡ ಹೋರಾಟಕ್ಕೆ ಸಿದ್ಧವಾಗಬೇಕು- ಡಿ ಕೆ ಶಿವಕುಮಾರ್ ಕರೆ
ಒಕ್ಕಲಿಗ ಸಮುದಾಯ ದೊಡ್ಡ ಹೋರಾಟಕ್ಕೆ ಸಿದ್ಧವಾಗಬೇಕು ಎಂದು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ. ಒಕ್ಕಲಿಗ ಸಮುದಾಯದ ಮೀಸಲಾತಿ (Reservation) ಹೆಚ್ಚಳಕ್ಕೆ ಆಗ್ರಹಿಸಿ ನಡೆಸಬೇಕಾದ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು ,ಒಕ್ಕಲಿಗ (Okkaliga) ರ ಸಮುದಾಯದ ಮೀಸಲಾತಿಗಾಗಿ ನಾನು ಎಲ್ಲಿಗೆ ಕರೆದರೂ ಬರ್ತೀನಿ.
ಸಂಘಟನೆ ಆಗದೇ ಯಶಸ್ಸು ಸಿಗಲ್ಲ . ಮುಂದೆ ಅಥವಾ ಹಿಂದೆ ಅಥವಾ ಮಧ್ಯ ಹೀಗೆ ನಾನು ಎಲ್ಲಿಯಾದರೂ ಇದ್ದು, ಸಮಾಜಕ್ಕೆ ಬೆಂಬಲ ಕೊಡ್ತೇನೆ. ನಾವು ಯಾರ ಹಕ್ಕನ್ನೂ ಕಿತ್ತುಕೊಳ್ಳಲು ಇಲ್ಲಿ ಸಭೆ ಸೇರಿಲ್ಲ. ನಾವು ಇದೇ ಜಾತಿಯಲ್ಲಿ ಹುಟ್ಬೇಕು ಅಂತ ಅರ್ಜಿ ಹಾಕಿ ಹುಟ್ಟಿಲ್ಲ.ನಮ್ಮ ನಡುವಿನ ವೈಷಮ್ಯ ಮರೆತು ಹೋರಾಟ ಮಾಡಬೇಕು.ನಾವು ಯಾರ ಹಕ್ಕನ್ನೂ ಕೇಳ್ತಿಲ್ಲ ಸಮುದಾಯದ ಜನಸಂಖ್ಯೆ ಆಧರಿಸಿ ಮೀಸಲಾತಿ ಕೊಡಿ ಅಷ್ಟೇ ಎಂದು ಒಕ್ಕಲಿಗರ ಸಮುದಾಯದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ : – INDIA vs NEW ZEALAND ಹ್ಯಾಮಿಲ್ಟನ್ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ