ಎಸಿಬಿಗೆ (ACB) ಕಳಂಕಿತ ಅಧಿಕಾರಿಗಳನ್ನು ನೇಮಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ (Government Chief Secretary)ಗೆ ಹೈಕೋರ್ಟ್ (High Court) ಸೂಚನೆ ನೀಡಿದೆ. ಎಸಿಬಿಗೆ ಅಧಿಕಾರಿ ನೇಮಿಸುವಾಗ ಸಾರ್ವಜನಿಕ ಹಿತಾಸಕ್ತಿ ಗಮನಿಸಬೇಕು, ಭ್ರಷ್ಟಾಚಾರ (Corruption) ತಡೆಯಲೆಂದು ಎಸಿಬಿ ರಚಿಸಲಾಗಿದೆ.
ಎಸಿಬಿಗೆ ಅಧಿಕಾರಿಯಾಗುವವರಿಗೆ ವಿಶ್ವಾಸಾರ್ಹತೆ ಇರಬೇಕು. ಎಸಿಬಿ ಘನತೆಯನ್ನು ಉನ್ನತ ಹಂತಕ್ಕೆ ಒಯ್ಯುವ ಕ್ಷಮತೆ ಇರಬೇಕು. ಸರ್ವಿಸ್ ರೆಕಾರ್ಡ್, ಅಧಿಕಾರಿಯ ಸಮಗ್ರತೆಯನ್ನು ಪರಿಗಣಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಯಾವುದೇ ಒತ್ತಡಕ್ಕೆ ಒಳಗಾಗದಂತೆ ನೇಮಕ ನಡೆಸಬೇಕು, ಅಧಿಕಾರಿ ನೇಮಕ ಹಿಂದೆ ಆಂತರಿಕ, ಬಾಹ್ಯ ಪ್ರಭಾವ ಇರಬಾರದು, ಅಧಿಕಾರಿ ವಿರುದ್ಧ ಎಸಿಬಿ, ಲೋಕಾಯುಕ್ತ ತನಿಖೆ ನಡೆಯುತ್ತಿರಬಾರದು. ಅವರ ಕುಟುಂಬದವರ ವಿರುದ್ಧವೂ ತನಿಖೆ ನಡೆಯುತ್ತಿರಬಾರದು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ, DPAR ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಕೋರ್ಟ್ ?ಈ ಸಂದೇಶ ರವಾನಿಸಿದೆ.
ಇದನ್ನೂ ಓದಿ : – ಶೀಘ್ರದಲ್ಲೇ ಕಾಂಗ್ರೆಸ್ `ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದೆ –ಕಾಲೆಳೆದ ಬಿಜೆಪಿ