ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ – ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (DR SUDHAKAR ) ತಿಳಿಸಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಕೊರೊನಾ ಅಂಕಿ-ಅಂಶ ದಾಖಲಿಸಲು ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಪಾಲಿಸಲಾಗಿದ್ದು ಈವರೆಗೂ 40,060 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಅಧಿಕೃತ ದಾಖಲಾತಿ ಇದೆ ಎಂದಿದ್ದಾರೆ. 

ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ ಸಚಿವರು ಮನವಿ ಮಾಡಿದ್ದಾರೆ. ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 4.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ವರದಿ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಮುಗಿ ಬಿದ್ದಿರುವ ಬೆನ್ನಲ್ಲೇ, ಡಾ. ಸುಧಾಕರ್ ಈ ರೀತಿಯ ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ : – ಸಿದ್ದಾಪುರ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!