ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (DR SUDHAKAR ) ತಿಳಿಸಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಕೊರೊನಾ ಅಂಕಿ-ಅಂಶ ದಾಖಲಿಸಲು ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಪಾಲಿಸಲಾಗಿದ್ದು ಈವರೆಗೂ 40,060 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಅಧಿಕೃತ ದಾಖಲಾತಿ ಇದೆ ಎಂದಿದ್ದಾರೆ.
ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ ಸಚಿವರು ಮನವಿ ಮಾಡಿದ್ದಾರೆ. ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 4.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ವರದಿ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಮುಗಿ ಬಿದ್ದಿರುವ ಬೆನ್ನಲ್ಲೇ, ಡಾ. ಸುಧಾಕರ್ ಈ ರೀತಿಯ ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ : – ಸಿದ್ದಾಪುರ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು