ಹಾಡಹಗಲೇ ಡಿಎಸ್ಎಸ್ ಮುಖಂಡ (DSS leader) ಕೊಲೆಯಾಗಿರುವ ಘಟನೆ ತುಮಕೂರು (Tumkuru) ಜಿಲ್ಲೆ ಗುಬ್ಬಿ (Gubbi) ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನಡೆದಿದೆ. ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
![](https://rajnewskannada.in/wp-content/uploads/2022/06/Capture-1-27.png)
ನರಸಿಂಹಮೂರ್ತಿ (ಕುರಿ ಮೂರ್ತಿ) (45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುರಿ ಮೂರ್ತಿ ಡಿಎಸ್ಎಸ್ ಸಂಘದ ತಾಲ್ಲೂಕು ಸಂಚಾಲಕನಾಗಿದ್ದರು. ಇಂದು ಮಧ್ಯಾಹ್ನ ಟೀ ಅಂಗಡಿ ಮುಂದೆ ಕುಳಿತಿದ್ದ ವೇಳೆ ದುಷ್ಕರ್ಮಿಗಳು.ಅಟ್ಯಾಕ್ ಮಾಡಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿಎಸ್ಎಸ್ ಮುಖಂಡ ನರಸಿಂಹಮೂರ್ತಿ ಕೊಲೆ ಹಿನ್ನೆಲೆಯಲ್ಲಿ , ತುಮಕೂರಿನ ಡಿಸಿ ಕಛೇರಿ ಬಳಿ ಗೃಹ ಸಚಿವರ ಕಾರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಕಾರ್ಯಕರ್ತರನ್ನ ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಕಾರ್ಯಕರ್ತರನ್ನ ತಡೆದು ಗೃಹ ಸಚಿವರ ಕಾರಿಗೆ ಪೊಲೀಸರು ದಾರಿ ಮಾಡಿಕೊಟ್ಟರು. ಗೃಹ ಸಚಿವ ಆರಗ ಜ್ಞಾನೇಂದ್ರ. ಶವಾಗಾರಕ್ಕೆ ಭೇಟಿ ಕೊಟ್ಟರು. ಶವಾಗಾರದ ಬಳಿ ಮೃತ ನರಸಿಂಹಮೂರ್ತಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆದಷ್ಟು ಬೇಗ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಗೃಹ ಸಚಿವರು ಧೈರ್ಯ ತುಂಬಿದರು.
ಇದನ್ನೂ ಓದಿ : – ಬಿಬಿಎಂಪಿ ಎಲೆಕ್ಷನ್ ಪ್ಲಾನ್ – ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್