ನನ್ನ ಅಧಿಕಾರಾವಧಿಯಲ್ಲಿ ಒಮ್ಮೆಯೂ ಯಾವುದೇ ಇಲಾಖೆಯಲ್ಲಿ ಅಕ್ರಮದ ನೇಮಕ ಮಾಡಿಲ್ಲ – ಹೆಚ್.ಡಿ.ಕೆ

ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಡಿದ ಆರೋಪಕ್ಕೆ ದಾಖಲೆ ಕೇಳಿದ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ (H.D. KUMARASWAMY ) ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಅವರು ಮಾಡಿದ್ದು, ಹಿಂದೆ ಶಿಫಾರಸು ಅಭ್ಯರ್ಥಿಗಳಿಗೆ ಅರ್ಹತೆ ಇಲ್ಲದಿದ್ದರೆ ಸಿಎಂ ಹೇಳಿದರೂ ಕೆಲಸ ಆಗುತ್ತಿರಲಿಲ್ಲ.

ಯಾವಾಗ ಹಣ, ಜಾತಿಗಳ ಪ್ರಭಾವ ಹೆಚ್ಚಾಯಿತೋ ಸರ್ಕಾರಿ ಕೆಲಸಗಳ ಕಾಸ್ ಗೀಕರಣವೂ ಶುರುವಾಯಿತು ಎಂದಿದ್ದಾರೆ. ಪಿಎಸ್ ಐ ಅಕ್ರಮದ ಬಗ್ಗೆ ಕಹಿಸತ್ಯಗಳನ್ನು ಹೇಳಿದ ನನ್ನನ್ನೇ ದಾಖಲೆ ಕೊಡಿ ಎನ್ನುವ ಸರ್ಕಾರಕ್ಕೆ ಸಾಚಾತನದ ಕೊರೆತೆಯಿದೆ. ಹಿಟ್ ಅಂಡ್ ರನ್ ಎನ್ನುವ ಮೂಲಕ ಕೆಲವರು ಅಕ್ರಮದ ಬಲೆಯಿಂದ ಅಕ್ಕಪಕ್ಕ ಸರಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಒಮ್ಮೆಯೂ ಯಾವುದೇ ಇಲಾಖೆಯಲ್ಲಿ ಅಕ್ರಮದ ನೇಮಕ ಮಾಡಿಲ್ಲ. ಸಚ್ಛಾರಿತ್ರ್ಯ, ಅರ್ಹತೆ ಇದ್ದವರನ್ನೇ ಕೆಪಿಎಸ್ ಸಿ ಗೆ ನೇಮಕ ಮಾಡಿದ್ದೆ. ಅಂಥ ನೇಮಕಾತಿ ಅಥವಾ ಉದ್ಯೋಗ ನೀಡಿಕೆಯಲ್ಲಿ ಸಣ್ಣ ಲೋಪವೂ ಆಗಿಲ್ಲ. ಒಂದು ವೇಳೇ ಲೋಪವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ ಎಂದಿದ್ದಾರೆ. ಇದನ್ನೂ ಓದಿ :- ಹ್ಯೂಬ್ಲೊಟ್ ವಾಚ್ ಬಂದಿದ್ದು ಚಹಾ ಕುಡಿಸಿಯೋ ಅಥವಾ ಚಹಾ ಕುಡಿದೋ? ಸಿದ್ದುಗೆ ಪ್ರಶ್ನೆ ಮಾಡಿದ ಬಿಜೆಪಿ

2018ರಲ್ಲಿ ಸಿಎಂ ಆಗಿದ್ದಾಗ ಸಿದ್ಧಹಸ್ತರು ತಮಗೆ ಬೇಕಾದವರ ಹೆಸರನ್ನು ಶಿಫಾರಸು ಮಾಡಿ, ಕೆಪಿಎಸ್ ಸಿಯಲ್ಲಿ ಪ್ರತಿಷ್ಠಾಪಿಸಿ ಎಂದು ಒತ್ತಡ ಹೇರಿದ್ದರು. 2006ರಲ್ಲೂ ಕೆಲ ಶಾಸಕರು ತಮ್ಮ ಸಮುದಾಯದವರನ್ನು ಕರೆತಂದು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿ ಎಂದು ದುಂಬಾಲು ಬಿದ್ದಿದ್ದರು. ಅವರಿಗೆ ಬುದ್ದಿ ಹೇಳಿ ವಾಪಸ್ ಕಳಿಸಿದ್ದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಎರಡು ಸಲ ಸಿಎಂ ಆಗಿದ್ದಾಗ ಕೆಪಿಎಸ್ ಸಿ ಅಕ್ರಮಗಳಿಗೆ ಕಡಿವಾಣ ಹಾಕಿದ್ದೆ. ಕೆಪಿಎಸ್ ಸಿಯನ್ನು ತೊಳೆಯುತ್ತೇನೆಂದ ಸಿದ್ಧ ಹಸ್ತರೊಬ್ಬರು ಬಿಡಿಎ ಗುಡಿಸಿ ಗುಂಡಾಂತರ ಮಾಡಿದ್ದ, ರೀಡೂ ಋಣದ ತಿಮಿಂಗಲವನ್ನೇ ತಂದು ಕೆಪಿಎಸ್ ಸಿಯಲ್ಲಿ ಕೂರಿಸಿದ್ದರು, ಆದರೆ, ನಾನು ಭ್ರಷ್ಟರು ಉದ್ಯೋಗ ಸೌಧದ ಮೆಟ್ಟಿಲು ಹತ್ತಲು ಬಿಟ್ಟಿರಲಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ : – ಗೃಹ ಸಚಿವರ ವಿರುದ್ದ ಟ್ವೀಟ್ ಮೂಲಕ ಕಿಡಿಕಾರಿದ ಪ್ರಿಯಾಂಕ್ ಖರ್ಗೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!