ಚಾಮರಾಜಪೇಟೆಯ (Chamrajpet) ಈದ್ಗಾ ಮೈದಾನದಲ್ಲಿ (Eidga ground) ಸಿಸಿಟಿವಿ ಅಳವಡಿಕೆಗೆ ತೀವ್ರ ವಿರೋಧವ್ಯಕ್ತವಾಗಿದೆ. ಮಾಹಿತಿ ನೀಡದೆ ಸಿಸಿಟಿವಿ ಅಳವಡಿಕೆ ಮಾಡುತ್ತಿರುವುದು ತಪ್ಪು ಎಂದು ಬಿಬಿಎಂಪಿ (BBMP) ಅಧಿಕಾರಿಗಳ ಜೊತೆ ಜನರು ವಾಕ್ಸಮರ ನಡೆಸುತ್ತಿದ್ದಾರೆ.
![](https://rajnewskannada.in/wp-content/uploads/2022/06/image-166-1024x683.png)
ಸಿಸಿಟಿವಿ, ಹೈಮಾಸ್ಕ್ ಫಿಕ್ಸ್ ಮಾಡಬೇಡಿ ಅಂತ ಪಟ್ಟು ಹಿಡಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಸಿಸಿಟಿವಿ ಅಳವಡಿಕೆ ಮಾಡಬೇಡಿ ಎಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಸಾರ್ವಜನಿಕರು ವಾಗ್ವಾದಕ್ಕಿಳಿದಿದ್ದಾರೆ.
![](https://rajnewskannada.in/wp-content/uploads/2022/06/image-167-1024x683.png)
ಈದ್ಗಾ ಮೈದಾನ ವಿವಾದ ಕುರಿತು ಮುಸ್ಲಿಂ ಅಸೋಸಿಯೇಷನ್ ಸಭೆ
ಈದ್ಗಾ ಮೈದಾನ ವಿವಾದ ಕುರಿತು ಕರ್ನಾಟಕದ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಸಭೆ ನಡೆಸುತ್ತಿದೆ. ಸಭೆಯಲ್ಲಿ ಶಾಸಕ ಜಮೀರ್ (jameer ahamed) , ವಕ್ಫ್ ಮಂಡಳಿ ಅಧ್ಯಕ್ಷ ಮುಹಮ್ಮದ್ ಶರೀಪ್ ಸಾಅದಿ (Mohammed sharif saadi) ಮುಸ್ಲಿಂ ಮುಖಂಡರು ಭಾಗಿಯಾಗಿದ್ದಾರೆ. ಈದ್ಗಾ ಮೈದಾನ ವಕ್ಫ್ ಮಂಡಳಿಗೆ ಇಲ್ಲವೇ ಬಿಬಿಎಂಪಿಗೆ ಸೇರಿದ್ದಾ ಎಂಬ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸುವ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಈ ನಡುವೆ ವೇಳೆ ಹಿಂದೂಪರ (Hindu) ಸಂಘಟನೆಗಳು ದಿನಾಂಕ 21 ರಂದು ಯೋಗ ದಿನಾಚರಣೆ ಕಾರ್ಯಕ್ರಮ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಬಿಬಿಎಂಪಿ ಎಲ್ಲಾ ಅರ್ಜಿಗಳನ್ನು ವಿಚಾರಣಾ ಹಂತದಲ್ಲಿಟ್ಟಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಸಭೆ ನಡೆಸುತ್ತಿದೆ.