ಮೊಹಮದ್ ಪೈಗಂಬರ್ ಬಗ್ಗೆ ಪ್ರಬಂಧ ಸ್ಪರ್ಧೆ – ಶಾಲೆಗೆ ನುಗ್ಗಿದ ಶ್ರೀರಾಮಸೇನೆ ಕಾರ್ಯಕರ್ತರಿಂದ ವಿರೋಧ

ಇಸ್ಲಾಂ ಧರ್ಮ ಪ್ರವರ್ತಕ ಪ್ರವಾದಿ ಮೊಹಮದ್ ಪೈಗಂಬರ್ ಬಗ್ಗೆ ಗದಗ ( gadaga ) ದ ಶಾಲೆಯೊಂದರಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು ಶ್ರೀರಾಮಸೇನೆ ( sri ramasena ) ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.

ಇಸ್ಲಾಂ ಧರ್ಮ ಪ್ರವರ್ತಕ ಪ್ರವಾದಿ ಮೊಹಮದ್ ಪೈಗಂಬರ್ ಬಗ್ಗೆ ಗದಗ ( gadaga ) ದ ಶಾಲೆಯೊಂದರಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು ಶ್ರೀರಾಮಸೇನೆ ( sri ramaseena ) ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.

ಜಿಲ್ಲೆಯ ನಾಗಾವಿ ಪ್ರೌಢಶಾಲೆಯಲ್ಲಿ ಪ್ರವಾದಿ ಪೈಗಂಬರರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾರ್ಯಕರ್ತರು, ‘ಪಠ್ಯದಲ್ಲಿ ಇಲ್ಲದ ವಿಷಯದ ಬಗ್ಗೆ ಪ್ರಬಂಧ ಬರೆಯಲು ಸೂಚಿಸಿದ್ದು ಯಾಕೆ’ ಎಂದು ಪ್ರಶ್ನಿಸಿದರು. ಇದನ್ನೂ ಇದೆ : – ಕಟೀಲ್ ಓರ್ವ ವಿದೂಷಕ ಇದ್ದಂಗೆ – ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ


ಶಾಲೆಯ ಮುಖ್ಯ ಶಿಕ್ಷಕರಾಗಿರುವ ಎ.ಎಲ್. ಬಿಜಾಪುರ ಅವರು ಪೈಗಂಬರ್ ಅವರಿಗೆ ಸಂಬಂಧಿಸಿದ ಪುಸ್ತಕವೊಂದನ್ನು 8ನೇ ತರಗತಿ ಮಕ್ಕಳಿಗೆ ಕೊಟ್ಟು ಓದಲು ಪ್ರೇರೇಪಿಸಿದ್ದರು. ನಂತರ ಪ್ರಬಂಧ ಬರೆಯುವಂತೆ ಮಕ್ಕಳಿಗೆ ಸೂಚಿಸಿದ್ದರು.

ಉತ್ತಮ ಪ್ರಬಂಧಕ್ಕೆ 8 ಸಾವಿರ ಬಹುಮಾನ ನೀಡುವುದಾಗಿ ಹೇಳಿದ್ದರು. ಇಂಥ ಪ್ರಯತ್ನಗಳ ಮೂಲಕ ಮಕ್ಕಳನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಕಾರ್ಯಕರ್ತರು ದೂರಿದರು. ಸ್ಥಳಕ್ಕೆ ಜಿಪಂ ಸಿಇಒ ಹಾಗೂ ಡಿಡಿಪಿಐ ಬರಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಇದೆ : –  ಟಿಪ್ಪು ಸುಲ್ತಾನ್ನ ಮೂಲ ಹೆಸರು ತಿಪ್ಪೇಸ್ವಾಮಿ- ಕಾಂಗ್ರೆಸ್ ನಾಯಕ ಟ್ವೀಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!