ಇಸ್ಲಾಂ ಧರ್ಮ ಪ್ರವರ್ತಕ ಪ್ರವಾದಿ ಮೊಹಮದ್ ಪೈಗಂಬರ್ ಬಗ್ಗೆ ಗದಗ ( gadaga ) ದ ಶಾಲೆಯೊಂದರಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು ಶ್ರೀರಾಮಸೇನೆ ( sri ramaseena ) ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.
ಜಿಲ್ಲೆಯ ನಾಗಾವಿ ಪ್ರೌಢಶಾಲೆಯಲ್ಲಿ ಪ್ರವಾದಿ ಪೈಗಂಬರರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾರ್ಯಕರ್ತರು, ‘ಪಠ್ಯದಲ್ಲಿ ಇಲ್ಲದ ವಿಷಯದ ಬಗ್ಗೆ ಪ್ರಬಂಧ ಬರೆಯಲು ಸೂಚಿಸಿದ್ದು ಯಾಕೆ’ ಎಂದು ಪ್ರಶ್ನಿಸಿದರು. ಇದನ್ನೂ ಇದೆ : – ಕಟೀಲ್ ಓರ್ವ ವಿದೂಷಕ ಇದ್ದಂಗೆ – ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಶಾಲೆಯ ಮುಖ್ಯ ಶಿಕ್ಷಕರಾಗಿರುವ ಎ.ಎಲ್. ಬಿಜಾಪುರ ಅವರು ಪೈಗಂಬರ್ ಅವರಿಗೆ ಸಂಬಂಧಿಸಿದ ಪುಸ್ತಕವೊಂದನ್ನು 8ನೇ ತರಗತಿ ಮಕ್ಕಳಿಗೆ ಕೊಟ್ಟು ಓದಲು ಪ್ರೇರೇಪಿಸಿದ್ದರು. ನಂತರ ಪ್ರಬಂಧ ಬರೆಯುವಂತೆ ಮಕ್ಕಳಿಗೆ ಸೂಚಿಸಿದ್ದರು.
ಉತ್ತಮ ಪ್ರಬಂಧಕ್ಕೆ 8 ಸಾವಿರ ಬಹುಮಾನ ನೀಡುವುದಾಗಿ ಹೇಳಿದ್ದರು. ಇಂಥ ಪ್ರಯತ್ನಗಳ ಮೂಲಕ ಮಕ್ಕಳನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಕಾರ್ಯಕರ್ತರು ದೂರಿದರು. ಸ್ಥಳಕ್ಕೆ ಜಿಪಂ ಸಿಇಒ ಹಾಗೂ ಡಿಡಿಪಿಐ ಬರಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಇದನ್ನೂ ಇದೆ : – ಟಿಪ್ಪು ಸುಲ್ತಾನ್ನ ಮೂಲ ಹೆಸರು ತಿಪ್ಪೇಸ್ವಾಮಿ- ಕಾಂಗ್ರೆಸ್ ನಾಯಕ ಟ್ವೀಟ್