ಎರಡು ದಿನದಲ್ಲಿ ಕೇಂದ್ರ ನಾಯಕರನ್ನ ಸಂಪರ್ಕಿಸಿ ಸಂಪುಟ ವಿಸ್ತರಣೆ ಅಂತಿಮ ಗೊಳಿಸುವೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-04-23-at-11.31.54-AM-2-1024x768.jpeg)
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪರಿಷತ್ ಹಾಗೂ ರಾಜ್ಯ ಚುನಾವಣೆಯಲ್ಲಿ ಬ್ಯೂಸಿ ಇದ್ದೇವೆ. ನಿನ್ನೆಯಷ್ಟೇ ಕೊರ್ ಕಮಿಟಿ ಸಭೆ ಆಗಿದೆ. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ರು. ಇದನ್ನೂ ಓದಿ : – ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ – ರಾಹುಲ್
ವಿಜಯೇಂದ್ರಗೆ ಪರಿಷತ್ ಸ್ಥಾನ ನೀಡಿ – ಮಂತ್ರಿ ಮಾಡುವ ವಿಚಾರ
ಅದು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತೆ. ಹಿಜಾಬ್, ಹಲಾಲ್ ಆಜಾನ್ ವಿವಾದದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದೇವೆ.
![](https://rajnewskannada.in/wp-content/uploads/2022/05/WhatsApp-Image-2022-05-14-at-4.22.18-PM-1-1024x576.jpeg)
ರಾಜ್ಯದಲ್ಲಿ ದಕ್ಷ, ಜನಪರ ಆಡಳಿತ ನೀಡುತ್ತಿದ್ದೇವೆ. ಅಜಾನ್ ವಿಚಾರವಾಗಿಯೂ ನಾವು ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ಬಗೆಹರಿಸಿದ್ದೇವೆ. ಜನಪರ ಹಾಗೂ,ದಕ್ಷ ಆಡಳಿತ ನೀಡ್ತಿದ್ದೇವೆ. ವಿರೋಧಿಗಳಿಗೆ ಅದೇ ನಮ್ಮ ಉತ್ತರ ಎಂದು ತಿಳಿಸಿದ್ರು.
ಇದನ್ನೂ ಓದಿ : – ಜಿಟಿ ದೇವೇಗೌಡ ಮೊಮ್ಮಗಳು ಅನಾರೋಗ್ಯದಿಂದ ವಿಧಿವಶ