ಬೆಳಗಾವಿ : ಕರ್ನಾಟಕ ರಾಜ್ಯ ರೈ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ವಿವಿಧ ಬೇಡಿಕೆ ಇಡೇರಿಕೆಗಾಗಿ ಬೆಳಗಾವಿ ಚೆನ್ನಮ್ಮ ವೃತ್ತದಿಂದ ಸುವರ್ಣ ಗಾರ್ಡನ್ವರೆಗೆ ಕಾಲ್ನಡಿಗೆ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ.
ಕರ್ನಾಟಕ ರಾಜ್ಯ ರೈ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ್ದು, ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ, ಮಹದಾಯಿ ಹೋರಾಟ, ಬರ ಪರಿಹಾರಕ್ಕಾಗಿ ಉತ್ತರ ಕರ್ನಾಟಕದಲ್ಲಿನ ಅಭಿವೃದ್ದಿಗಾಗಿ, ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಬೇಡಿಕೆ ಇಡೇರಿಕೆಗಾಗಿ ಪ್ರತಿಭಟನೆಗೆ ಅನ್ನದಾತರು ಮುಂದಾಗಿದ್ದಾರೆ. ಇಂದಿನ ರೈತರ ಪ್ರತಿಭಟನೆಗೆ ಮೇಲು ಕೋಟೆ ಶಾಸಕ ದರ್ಶನ ಪುಟ್ಟಯ್ಯ ಸಾಥ್ ನೀಡಿದ್ದಾರೆ.