ಚಾಮರಾಜನಗರ (Chamrajnagara) ದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS.Yediyurappa) ಭಾವಚಿತ್ರ ಇಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಭಿಮಾನಿಗಳು ವೇದಿಕೆ ಎದುರು ಕಾರ್ಯಕ್ರಮದ ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇದೇ ವೇಳೆ ಇದು ಪಕ್ಷದ ಕಾರ್ಯಕ್ರಮವಲ್ಲ ಸರ್ಕಾರಿ ಕಾರ್ಯಕ್ರಮ. ಹಾಗಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಚಿತ್ರವನ್ನು ಹಾಕಿಲ್ಲ. ಶಿಷ್ಟಾಚಾರದ ನಿಯಮಪಾಲನೆಗಾಗಿ ಸರ್ಕಾರಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ವೈ ಅವರ ಚಿತ್ರವನ್ನು ಹಾಕಿಲ್ಲ. ಇದಕ್ಕಾಗಿ ಯಾರು ಸಹ ಅನ್ಯತಾ ಭಾವಿಸಬಾರದು ಎಂದು ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ (Niranjan kumar) ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು.
ಇದನ್ನು ಓದಿ : – ಧಾರವಾಡದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಖಾಲಿ ಕೊಡಗಳೊಂದಿಗೆ ಪ್ರತಿಭಟನೆ