ಆಶಾ ಕಾರ್ಯಕರ್ತೆಯರ ಬದುಕಿನ ಜತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಕುಮಾರಸ್ವಾಮಿ

ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ಆಶಾ ಕಾರ್ಯಕರ್ತರ ಪಾತ್ರ ದೊಡ್ಡದಾಗಿದೆ. ಹಾಗಾಗಿ ಆಶಾ ಕಾರ್ಯಕರ್ತರಿಗೆ ಗೌರವ ಧನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಆಶಾ ಕಾರ್ಯಕರ್ತರು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಿಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ಥರವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ 3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ, ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದರು.

ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ, 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ . ಇದೊಂದು ಭ್ರಮೆ ಅಲ್ಲದೆ ಮತ್ತೇನು? ಎಂದು ಸರ್ಕಾರ ವಿರುದ್ದ ಗುಡುಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!