ರಾಜ್ಯದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಕುಮಾರಸ್ವಾಮಿ

ಬೀದರ್: ಕರ್ನಾಟಕದಲ್ಲಿ ಇಂತಹ ಕೆಟ್ಟ ಸರಕಾರ ನೋಡಿರಲಿಲ್ಲ. ಹಿಂದೆಯೂ ಇಂತಹ ಸರ್ಕಾರ ಬಂದಿರಲಿಲ್ಲ. ಮುಂದೆಯೂ ಬರುವುದಿಲ್ಲ. ಕೊರೋನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಮಾಜಿ ಸಿಎಂ ಹೆಚ್‌. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಗಮನಿಸಿದೆ.18ರ ನಂತರ ಸರ್ವಪಕ್ಷ ಸಭೆ ಕರೆದು ಸಲಹೆ ಪಡೆಯುವುದಾಗಿ ಕೇಳುತ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಸಭೆ ಕರೆಯುತ್ತಾರೆ. ಸಲಹೆ ಪಡೆಯುತ್ತಾರೆ? ಎಂದು ಪ್ರಶ್ನಿಸಿದರು.

ಇನ್ನು ಈಗಾಗಲೇ ‌ಮೊದಲ ಹಂತದಲ್ಲಿ ಅನಾಹುತಗಳಾದಾಗ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಬಾರದೆಂದು‌ ಸಹಕಾರ ನೀಡಿದ್ದೇವು. ಆದರೆ, ಈಗ ಎರಡನೇ ಹಂತದ ಕೊರೋನಾ ಪ್ರಾರಂಭವಾಗಿದೆ. ಹಾಗಂತ, ಇದು ಏಕಾಏಕಿ ಬಂದದ್ದಲ್ಲ. ತಜ್ಞರು ಸರಕಾರಕ್ಕೆ‌ ನಿರಂತರವಾಗಿ ಜನವರಿ ಫೆಬ್ರವರಿಯಲ್ಲಿ 2ನೇ ಹಂತದ ಕೊರೋನಾ ವೇಗವಾಗಿ ಹರಡುತ್ತದೆಂದು ವರದಿ ಕೊಟ್ಟಿದ್ದರು. ಕೊರೋನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಕಿಡಿಕಾರಿದರು.

ಒಂದು ಇಂಜೆಕ್ಷನ್ ಕೊಡಬೇಕು ಅಂದ್ರೆ ಆಸ್ಪತ್ರೆಗಳಲ್ಲಿ ಇಂಜೆಕ್ಷನ್ ಸಿಗುತ್ತಿಲ್ಲ. ಇನ್ನೆರಡು ದಿನ ಮಾತ್ರ ಸಿಗಬಹುದು. ಇಂತಹ ಕೀಳುಮಟ್ಟದ ಇಂತಹ ಅಮಾನವೀಯವಾಗಿ ನಡೆದುಕೊಳ್ಳುವ ಸರ್ಕಾರ ಇನ್ನೆಂದೂ ಸಿಗುವುದಿಲ್ಲ. ಮುಖ್ಯಮಂತ್ರಿಗಳ ಸಮೇತ ಎಲ್ಲರೂ‌ ಉಪಚಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಜನರ ಜೀವಕ್ಕಿಂತ ಇವರಿಗೆ ಚುನಾವಣೆ ಮುಖ್ಯವಾಗಿದೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!