ಕೊರೊನಾ ಹರಡಲು ಪಂಚರಾಜ್ಯ ಚುನಾವಣೆಯೇ ಕಾರಣ: ಹೆಚ್ ಡಿ ದೇವೇಗೌಡ

ಬೆಂಗಳೂರು: ಕೊರೊನಾ ವಿಶ್ವದಾದ್ಯಂತ ನಿರೀಕ್ಷೆ ಮೀರಿ ಹರಡಿದೆ. ಕೊರೊನಾ ಈ ಮಟ್ಟಿಗೆ ಹರಡುವುದಕ್ಕೆ ಪಂಚರಾಜ್ಯ ಚುನಾವಣೆಯೇ ಕಾರಣ ಎಂದು ಕೇಂದ್ರದ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕಿಡಿ ಕಾರಿದ್ದಾರೆ.

ಇಂದು ಜೆಡಿಎಸ್ ಭವನದಲ್ಲಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ಪ್ರಧಾನಿ‌ ಮೋದಿ ಹಾಗೂ ನಮ್ಮ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೊಟ್ಟಿದ್ದೀನಿ. ನಾನು 12 ಸಲಹೆಗಳನ್ನ ಕೊಟ್ಟಿದ್ದೆ ಅದರಲ್ಲಿ ಕೆಲವು ಸಲಹೆಗಳನ್ನ ಕಾರ್ಯಗತ ಮಾಡುತ್ತಿದ್ದಾರೆ. ಕೇಂದ್ರದಿಂದ ಲಸಿಕೆ, ಔಷಧಿ, ವೆಂಟಿಲೇಟರ್, ಆಕ್ಸಿಜನ್ ನೀಡುವುದಲ್ಲಿ ಮಲತಾಯಿ ದೋರಣೆ ತೋರಿದೆ. ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡುತ್ತಾರೆ. ನಮಗೆ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದರು.

ಇನ್ನು ಸೋಂಕು ಹೆಚ್ಚಳಕ್ಕೆ ಪಂಚ ರಾಜ್ಯಗಳ ಚುನಾವಣೆ ಕೂಡ ಕಾರಣವಾಗಿರಬಹುದು ಕೇಂದ್ರ ಸರ್ಕಾರದವರು 5 ರಾಜ್ಯಗಳ ಚುನಾವಣೆ ಕಡೆ ಹೆಚ್ಚು ಗಮನ ಕೊಟ್ಟರು. ಚುನಾವಣೆ ಹಿನ್ನಲೆ ಕೊರೊನಾ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಹೀಗೆ ಆಗುತ್ತಿರಲಿಲ್ಲ ಎಂದು ತಿಳಿಸಿದರು.

ಚುನಾವಣೆ ಕೆಲಸದಿಂದ ಕೊರೊನಾ ಕೆಲಸದಲ್ಲಿ ಮೋದಿ ಅವರು ಸ್ವಲ್ಪ ನೆಗಲೆಟ್ ಮಾಡಿದ್ರು ಅಂತ ಎಲ್ಲರೂ ಮಾತನಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಹೆಚ್ಚು ಸಮಸ್ಯೆ ಆಗೋದಕ್ಕೆ ಕಾರಣ ಆಗಿರಬಹುದು. ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತ ಪಣಕ್ಕೆ ಬಿದ್ರು. ಚುನಾವಣೆ ಗಮನದಲ್ಲಿ ಕೊರೊನಾ ನಿರ್ವಹಣೆ ಮರೆತರು ಎಂದು ಪ್ರಧಾನಿ ಮೋದಿ ವಿರುದ್ದ ದೇವೇಗೌಡರ ಕಿಡಿ ಕಾರಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!