ಮಾಜಿ ಸ್ಪೀಕರ್ ಕೆ ಆರ್​ ಪೇಟೆ​ ಕೃಷ್ಣ ನಿಧನ

ಮೈಸೂರು : ವಿಧಾನಸಭೆಯ ಮಾಜಿ ಸ್ಪೀಕರ್ ಕೆ ಆರ್‌ ಪೇಟೆ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಲಿವರ್ ಕ್ಯಾ‌ನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ಲಿವರ್ ಕ್ಯಾನ್ಸರ್ ಚಿಕಿತ್ಸೆಗೆ ಅವರು ಚೆನ್ನೈಗೂ ಸಹ ತೆರಳಿದ್ದರು. ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಕೃಷ್ಣ ಅವರನ್ನು ಮೈಸೂರಿನ‌ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು. ಇದೀಗ ಅವರು ನಿಧನರಾಗಿದ್ದಾರೆ.

ಕೃಷ್ಣ ಅವರು ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರು. ಮೂರು ಬಾರಿ ಕೆಆರ್‌ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು, ಕೆ.ಆರ್.ಪೇಟೆ ಕೃಷ್ಣ ಅವರು ಧರ್ಮಸಿಂಗ್ ಮತ್ತು ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕಗೊಂಡಿದ್ದರು. 

ಕೊನೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಮೂರು ಬಾರಿ ಶಾಸಕ, ಒಂದು ಬಾರಿ ಎಂಪಿ ಆಗಿದ್ದ ಕೃಷ್ಣ ಅವರು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕೆಲಸ ಮಾಡಿದ್ದರು.

ಇನ್ನು ಮಾಜಿ ಸ್ಪೀಕರ್ ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!