Home

ಫೆ.1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಬೆಳವಣಿಗೆ – ಕುತೂಹಲ ಮೂಡಿಸಿದ ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಚುನಾವಣೆ ಚಾಣಕ್ಯ ಅಮಿತ್ ಶಾ ನಿನ್ನೆ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸಂಚರಿಸಿ ರಾಜ್ಯ ಕೇಸರಿ ಪಡೆಗೆ ಮತ್ತಷ್ಟು ಜೋಶ್ ತುಂಬಿದ್ದಾರೆ.

ಬಿಜೆಪಿ (BJP) ಚುನಾವಣೆ ಚಾಣಕ್ಯ ಅಮಿತ್ ಶಾ (AMIT SHAH) ನಿನ್ನೆ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸಂಚರಿಸಿ ರಾಜ್ಯ ಕೇಸರಿ ಪಡೆಗೆ ಮತ್ತಷ್ಟು ಜೋಶ್ ತುಂಬಿದ್ದಾರೆ. ಬಳಿಕ ಬೆಳಗಾವಿಯಲ್ಲಿ ಅಮಿತ್ ಶಾ ಸೀಕ್ರೆಟ್ ಸಭೆ ನಡೆಸಿದ್ದು, ಸಭೆಯಲ್ಲಿ ರಾಜ್ಯ ನಾಯಕರಿಗೆ ಕೆಲ ಟಾಸ್ಕ್ ಕೊಟ್ಟಿದ್ದಾರೆ.

ಇನ್ನು ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, (BALCHANDRA JARKIHOLI) ಫೆ.1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಬೆಳವಣಿಗೆ ಆಗುತ್ತೆ. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಇವತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಸಭೆ ಮಾಡಿದ್ದಕ್ಕೆ ಬಹಳ ಒಳ್ಳೆಯದಾಗಿದೆ. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಅರುಣ್ ಸಿಂಗ್ ಅವರು ಬೆಳಗಾವಿ ಒಳ್ಳೆ ವಾತಾವರಣ ಇದ್ದು ಎಲ್ಲರೂ ಕೂಡಿ ಹೆಚ್ಚಿನ ಸೀಟ್ ಗೆಲ್ಲುವ ಪ್ರಯತ್ನ ಮಾಡಬೇಕೆಂದು ಆದೇಶ ಮಾಡಿದ್ದಾರೆ. ಆ ಪ್ರಕಾರ ನಾಳೆಯಿಂದ ಎಲ್ಲರೂ ಎನೇ ವ್ಯತ್ಯಾಸ ಇದ್ರೂ ಮರೆತು ಪಕ್ಷದ ಕೆಲಸ ಮಾಡುತ್ತೇವೆ. ಲೀಡರ್ ಶಿಪ್ ಭಾರತೀಯ ಜನತಾ ಪಾರ್ಟಿ, ಮೋದಿಯವರು, ಅಮಿತ್ ಶಾ ಅವರು ಮಾಡಲಿದ್ದಾರೆ. ಎಲ್ಲರೂ ಕೂಡಿ ಭಾರತೀಯ ಜನತಾ ಪಾರ್ಟಿ ಲೀಡರ್ಶೀಪ್ ನಲ್ಲಿ ಕೆಲಸ ಮಾಡುತ್ತೇವೆ ಎಂದರು. ಇದನ್ನು ಓದಿ :- ಕರ್ನಾಟಕದ ಅಮ್ಮ ಭವಾನಿ ರೇವಣ್ಣ – ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್

Image

ಎಲ್ಲರೊಳಗೆ ಭಿನ್ನಾಭಿಪ್ರಾಯ ಇಲ್ಲ. ಕೆಲವೊಂದು ಕಡೆ ಇರಬಹುದು. ಇಂದು ಅಮಿತ್ ಶಾ ಮೀಟಿಂಗ್ ಮಾಡಿದ್ದರಿಂದ ಬೆಳಗಾವಿ ಬಿಜೆಪಿಗೆ ಒಳ್ಳೆ ಬೆಳವಣಿಗೆ. ಮೀಟಿಂಗ್ ನಲ್ಲಿ ಬಹಳಷ್ಟು ವಿಚಾರ ಚರ್ಚೆಯಾಗಿದ್ದು, ಎಲ್ಲರ ಅಭಿಪ್ರಾಯ ಕೇಳಿ ಹೇಳಿದ್ದಾರೆ. ಎಲ್ಲರೂ ಕೂಡಿ ಗಟ್ಟಿಯಾಗಿ ನಿಂತು ಕನಿಷ್ಠ 15 ಸೀಟ್ ಗೆಲ್ಲಬೇಕು ಅಂತ ಹೇಳಿದ್ದಾರೆ. ಆ ಪ್ರಕಾರ ನಾವೆಲ್ಲರೂ ಕೂಡಿ ಕೆಲಸ ಮಾಡುತ್ತೇವೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಅವರು ಹೇಳಿದ್ದು ಒಳ್ಳೆಯದಕ್ಕೆ ಎಂದು ನಾವೆಲ್ಲರೂ ಕೂಡಿ ಕೆಲಸ ಮಾಡಬೇಕು ಎಂದು ಹೇಳಿದ್ರು.

ಇದನ್ನು ಓದಿ :- ಬೆಳ್ಳಿ ಬಂಗಾರ ಪದಕ ಗೆದ್ದುಕೊಟ್ಟಿದ್ದ `ಮೈಸೂರು ಹುಲಿ-193′ ಖ್ಯಾತಿಯ ಕೊಬ್ಬರಿ ಹೋರಿ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!