ಬೆಂಗಳೂರು ( bangalore ) ನಗರದ ಹೋಟೆಲ್ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ನು ಮಂದೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ( prathap reedy ) ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ರಾತ್ರಿ ಒಂದು ಗಂಟೆಯ ತನಕ ಕೆಲವು ಕಡೆ ಮಾತ್ರ ಹೋಟೆಲ್ ಗಳು ತೆರೆದಿರುತ್ತಿದ್ದವು. ಕೆಲವು ಕಡೆ ಪೊಲೀಸರು ಹೋಟೆಲ್ ಬಂದ್ ಮಾಡಿಸುತ್ತಿದ್ರು. ಈಗ ಎಲ್ಲಾ ಕಡೆಯಲ್ಲೂ ಮಧ್ಯರಾತ್ರಿ 1 ಗಂಟೆಯ ತನಕ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ನಗರದಾದ್ಯಂತ ರಾತ್ರಿ 1 ಗಂಟೆ ವರೆಗೂ ಹೋಟೆಲ್ ಊಟ ಸಿಗಲಿದೆ. ಇದನ್ನೂ ಓದಿ :- ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ
ರಾತ್ರಿ 1 ಗಂಟೆ ನಂತರ ಹೊಟೇಲ್ ( hotel )ತೆರೆಯದಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿರೋದಕ್ಕೆ ಹೊಟೇಲ್ ಮಾಲಿಕರು ಅಸಮಾಧಾನ ಹೊರಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಸಿಎಂ ಜೊತೆ ಚರ್ಚಿಸಲು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ :- ಸಾವಿರ ಕಿ.ಮೀ ಕ್ರಮಿಸಿದ ಭಾರತ್ ಜೋಡೋ ಪಾದಯಾತ್ರೆ – ಬಳ್ಳಾರಿ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ