ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ದೇಶದ ಸಮಸ್ಯೆಗಳ ಬಗ್ಗೆ ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇವೆ ಎಂದು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ದೇವೇಗೌಡರ ಭೇಟಿ ಬಳಿಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯುವ ಶಕ್ತಿ ದೇಶದಲ್ಲಿದೆ.
![](https://rajnewskannada.in/wp-content/uploads/2022/05/WhatsApp-Image-2022-05-26-at-2.43.25-PM-1-1024x595.jpeg)
ದೇಶದಲ್ಲಿ ಹಲವುಸಂಪನ್ಮೂಲಗಳಿವೆ. ಇವತ್ತಿಗೂ ಹಲವು ಸಮಸ್ಯೆಗಳ ಬಗ್ಗೆ ಚರ್ಚೆಯಾಗಿಲ್ಲ. ಉಜ್ವಲ್ ಹಿಂದೂಸ್ತಾನ್ ನಮಗೆ ಬೇಕಿದೆ. ಜನರು ಈ ನಿಟ್ಟಿನಲ್ಲಿ ಗಮನಹರಿಸಬೇಕಿದೆ. ದೇಶದಲ್ಲಿ ರೈತರು, ದಲಿತರು,ಆದಿವಾಸಿಗಳು ಕಷ್ಡದಲ್ಲಿದ್ದಾರೆ. ಭರವಸೆಗಳನ್ನ ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ :- ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ
![](https://rajnewskannada.in/wp-content/uploads/2022/05/WhatsApp-Image-2022-05-26-at-2.12.52-PM-1-1024x682.jpeg)
ಯುವಕರಿಗೆ ಉದ್ಯೋಗ ಕೊಟ್ರಾ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ. ಬಹಳ ಶೀಘ್ರ ದೇಶದಲ್ಲಿ ಬದಲಾವಣೆಯಾಗಲಿದೆ. ಕರ್ನಾಟಕದ ಪಾಲಿಟಿಕ್ಸ್ ಕೂಡ ಗೊತ್ತಿದೆ. ಕರ್ನಾಟಕ ವಿಧಾನಸಭೆ ಎಲೆಕ್ಷನ್ ಬರ್ತಿದೆ. ಕುಮಾರಸ್ಚಾಮಿ ಸಿಎಂ ಆಗಿದ್ದವರು. ಭಾರತ ಬದಲಾಗುತ್ತೆ ಭಾರತ ಬದಲಿಸುವ ಕೆಲಸ ಆಗಲಿದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ಮ ನಡೆಸುತ್ತಿದ್ದೇವೆ ಎಂದು ಹೇಳಿದ್ರು.
ಇದನ್ನೂ ಓದಿ :- ದೇವೇಗೌಡರ ವಂಶ ನನಗೂ ಒಂದು ಆದರ್ಶ – ಕೆ.ಎಸ್ ಈಶ್ವರಪ್ಪ