ಬೆಂಗಳೂರು : ಕಲಬುರ್ಗಿ ಜಿಲ್ಲೆಯಲ್ಲಿ ನಾಳೆಯಿಂದ ಮೇ. 31 ವರೆಗೆ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೀಸಿಲಿನ ತಾಪಪಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕಲಬುರ್ಗಿ ವಿಭಾಗದ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆ ಹಾಗೂ ಹಾಗೂ ಬೆಳಗಾವಿ ವಿಭಾಗದ ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಕರ್ತವ್ಯ ನಿರ್ವಹಿಸಲು ಆದೇಶ ಹೊರಡಿಸಲಾಗಿದ್ದು, ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯದ ವರೆಗೆ ಈ ಆದೇಶ ಅನ್ವಯವಾಗಲಿದೆ.
ಕೊರೋನಾ ತುರ್ತು ಸಂದರ್ಭದಲ್ಲಿ ಡಿಸಿ ಮತ್ತು ಜಿ ಪಂ ಸಿಇಓಗಳ ಆದೇಶದಂತೆ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ ಎಸ್ ರವಿಕುಮಾರ್ ಆದೇಶದಲ್ಲಿ ಸೂಚಿಸಿದ್ದಾರೆ..