ಮೃತ ಪಟ್ಟ ಪತಿರಾಯ ಹಾವಿನ ರೂಪದಲ್ಲಿ ಬಂದಿದ್ದಾನೆ ಎಂದು ನಂಬಿದ ಅಜ್ಜಿಯೊಬ್ಬರು ಕಳೆದ 4 ದಿನಗಳಿಂದ ಹಾವಿನ ಜೊತೆಗೆ ಇರುವ ಮೂಲಕ ಅಜ್ಜಿಯೊಬ್ಬರು ಆಶ್ಚರ್ಯ ಮೂಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.
![](https://rajnewskannada.in/wp-content/uploads/2022/06/Capture-8.png)
ಅಜ್ಜಿಯ ನಂಬಿಕೆ ಬಗ್ಗೆ ಸ್ಥಳೀಯ ಜನರು ಆಗಮಿಸಿ, ವಿಸ್ಮಯ ದಂತೆ ನೋಡಲು ಮುಗಿ ಬೀಳುತ್ತಿದ್ದಾರೆ. ಸಾರವ್ವಾ ಮೋನೇಶ್ ಕಂಬಾರ ಎಂಬುವರ ಬಡ ಕುಟುಂಬದಲ್ಲಿ ಈ ಅಜ್ಜಿಯ ಮನೆಯಲ್ಲಿ 4 ದಿನಗಳ ಹಿಂದೆ ನಾಗರ ಹಾವು ಬಂದಿದೆ. ಅದನ್ನು ಹೂರಗೆ ಹಾಕಲು ಪ್ರಯತ್ನ ಪಟ್ಟರು ಹೋಗಲಿಲ್ಲ, ಇದರಿಂದ ಅಜ್ಜಿಯು ಆತಂಕಗೊಳ್ಳದೆ,ತನ್ನ ಪತಿ ಹಾವಿನ ರೂಪದಲ್ಲಿ ಬಂದಿರುವುದಾಗಿ ನಂಬಿದ್ದಾಳೆ. ಇದನ್ನೂ ಓದಿ : – ಶಿಕ್ಷಣ ಸಚಿವರ ಮನೆ ಮೇಲಿನ ದಾಳಿ ಪ್ರಕರಣ – ಬಂಧಿತರನ್ನ ಭೇಟಿ ಮಾಡಲಿರೋ ಡಿಕೆಶಿ
![](https://rajnewskannada.in/wp-content/uploads/2022/06/Capture1-1.png)
ಅಜ್ಜಿ ಯ ಪತಿ ಮೋನೇಶ ಎಂಬುವರು ಹಲವು ವರ್ಷಗಳ ಹಿಂದೆ ಮೃತಪಟ್ಟಿರುತ್ತಾರೆ. ಅವರೆ ಈ ಹಾವಿನ ರೂಪದಲ್ಲಿ ಬಂದು ನನ್ನ ಹತ್ತಿರ ಇದ್ದಾರೆ. ಅದಕ್ಕೆ ಯಾರು ದಕ್ಕೆ ಮಾಡಬಾರದು ಹಿಡಿಯಬಾರದು ಎಂದು ಅದನ್ನ 4 ದಿನಗಳಿಂದ ಅವರ ಚಾಪೆ ಮೇಲೆ ಇರಸಿ,ಅದನ್ನು ಜೋಪಾನ ಮಾಡುತ್ತಿದ್ದಾರೆ. ಇದರಿಂದ ಅಜ್ಜಿಯ ನಂಬಿಕೆ ಹಾಗೂ ನಾಗರ ಹಾವನ್ನು ನೋಡಲು ಸುತ್ತಮುತ್ತಲಿನ ಜನ ಮುಗಿ ಬಿದ್ದಿದ್ದಾರೆ.
ಇದನ್ನೂ ಓದಿ : – ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ- ಸುರಕ್ಷಿತ ಸ್ಥಳಗಳಿಗೆ 177 ಕಾಶ್ಮೀರ ಪಂಡಿತ್ ಶಿಕ್ಷಕರ ಸ್ಥಳಾಂತರ