ಗೂಂಡಾಗಿರಿ ಎಂಬುದು ಕಾಂಗ್ರೆಸ್ ನಾಯಕರಿಗೆ ವಂಶ ಪಾರಂಪರ್ಯವಾಗಿ ಬಂದ ಉಡುಗೊರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಸರಣಿ ಟ್ವೀಟ್ ಮೂಲಕ ಬಿಜೆಪಿ ಕಿಡಿಕಾರಿದೆ.
ಬೆಂಗಳೂರಿನಲ್ಲಿ ನಗರ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಕುಡಿದ ಅಮಲಿನಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ. ಗೂಂಡಾಗಿರಿ ಎಂಬುದು ಕಾಂಗ್ರೆಸ್ ನಾಯಕರಿಗೆ ವಂಶ ಪಾರಂಪರ್ಯವಾಗಿ ಬಂದ ಉಡುಗೊರೆ. ಇಂದಿರಾ ಗಾಂಧಿ ಕಾಲದಿಂದಲೇ ಗೂಂಡಾರಾಜ್ ವ್ಯವಸ್ಥೆ ಅಸ್ತಿತ್ವದಲ್ಲಿ ಇತ್ತು. ಅದೀಗ ಕರ್ನಾಟಕದಲ್ಲಿ ಮುಂದುವರಿಯುತ್ತಿದೆ. ದೆಹಲಿಯಲ್ಲಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಬಂಧನಕ್ಕೆ ಒಳಗಾದ ಶಾಸಕ, ಸಂಸದರಿಗೂ ಗೂಂಡಾಗಿರಿಯ ಘನ ಇತಿಹಾಸ ಇದೆ. ಒಬ್ಬರು ಕನಕಪುರದ ಅಘೋಷಿತ ರೌಡಿ, ಇನ್ನೊಬ್ಬರು ಗೂಂಡಾರಾಯರು.
ಯತಾರಾಜಾ ತಥಾ ಪ್ರಜಾ ಎಂಬುದು ಕಾಂಗ್ರೆಸ್ಸಿಗರಿಗೆ ಅನ್ವಯವಾಗುತ್ತದೆ. ಕೊತ್ವಾಲನ ಶಿಷ್ಯ ಕೆಪಿಸಿಸಿ ಅಧ್ಯಕ್ಷರಾದರೆ, ಗ್ಯಾಸ್ ಕಾಲೇಜಿನಲ್ಲಿ ಬ್ಲೇಡು, ಚಾಕು ಚೂರಿ ಹಿಡಿದು ಗೂಂಡಾಗಿರಿ ನಡೆಸುತ್ತಿದ್ದವರು ಮೇಲ್ಮನೆಯ ವಿಪಕ್ಷ ನಾಯಕ! ಇವರು ಜನರ ಪ್ರೀತಿಯಿಂದ ನಾಯಕರಾಗಿಲ್ಲ, ಜನರಿಗೆ ಭೀತಿ ಹುಟ್ಟಿಸಿ ನಾಯಕರಾಗಿದ್ದಾರೆ.
ಪಬ್ ನಲ್ಲಿ ಸಿಕ್ಕ ಸಿಕ್ಕವರ ಮೇಲೆ ಬಾಟಲಿಯಿಂದ ಹಲ್ಲೆ ಮಾಡುತ್ತಿದ್ದ ರೌಡಿ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ. ಗೊರಿಲ್ಲಾ ಶ್ರೀನಿವಾಸ ರಾಷ್ಟ್ರೀಯ ಅಧ್ಯಕ್ಷ. ಎಲ್ಲರೂ ಗೂಂಡಾಗಿರಿಯ ತುಣುಕುಗಳೇ. ಕೊತ್ವಾಲ್ ಶಿಷ್ಯ ಡಿಕೆಶಿ ಆಯ್ಕೆಗಳು ಅವರಂತೆಯೇ ಇರುತ್ತದೆ. ಬೀದಿ ರೌಡಿಗಳು, ಬಿಟ್ ಕಾಯಿನ್ ಆಸಾಮಿಗಳಿಗೆ ಮುಂಚೂಣಿ ಘಟಕದ ನಾಯಕತ್ವ ನೀಡಲಾಗಿದೆ. ರೌಡಿ ಗುರುವಿಗೆ ಬೀದಿ ಗೂಂಡಾಗಳೇ ಶಿಷ್ಯರು ಎಂದು ಟೀಕಿಸಿದೆ.
ಇದನ್ನೂ ಓದಿ : – ಕಾನೂನಿನ ಮುಂದೆ ರಾಹುಲ್ ಗಾಂಧಿ, ಯಡಿಯೂರಪ್ಪ ಒಂದೇ – ಬಿಎಸ್ ವೈ