ಚಿತ್ರದುರ್ಗ: ಕಾರಾಗೃಹದಿಂದ ಬಿಡುಗಡೆ ಹೊಂದಿದ್ದ ಮುರುಘಾಶ್ರೀಗಳಿಗೆ ಮತ್ತೆ ಬಂಧನ ದ ಭೀತಿ ಶುರುವಾಗಿದೆ.
ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ . ಮುರುಘಾ ಶ್ರೀಗಳು ಮೊದಲ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಗೆಬಂದಿದ್ದರು.
ಇದೀಗ ಎರಡನೇ ಕೇಸ್ ನಲ್ಲಿ ಬಂಧಿಸುವಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ.
ಇತ್ತೀಚೆಗೆ ಮುರುಘಾಮಠ ಶ್ರೀಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು.ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು