ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ( siddaramaiah) ಅವರ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಸಿದ್ದರಾಮೋತ್ಸವ’ ಓಕೆ. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (d.k shivkumar ) ಅವರ ಪಕ್ಷ ಸೇವೆಯನ್ನು ಪರಿಗಣಿಸಿ ‘ಶಿವಕುಮಾರೊತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಿದ್ಧರಾಮಯ್ಯ – 75 ಅಮೃತ ಮಹೋತ್ಸವ ಸಮಿತಿಗೆ ಪತ್ರವನ್ನು ಬರೆದಿದ್ದಾರೆ.
ಹೊಣಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜೆ.ಸಿ ರಾಜು ( j. c raju ) ಎಂಬುವವರು ಈ ಪತ್ರ ಬರೆದಿದ್ದಾರೆ. ಶಿವಕುಮಾರೊತ್ಸವ – 23 ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಿ ಎಂದು ಸಮಿತಿಗೆ ಮನವಿ ಮಾಡಿದ್ದಾರೆ. ಸಿದ್ದರಾಮೊತ್ಸವ ಕಾರ್ಯಕ್ರಮದ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಜೆ.ಸಿ ರಾಜು ಅವರ ಪತ್ರ ಮಹತ್ವ ಪಡೆದುಕೊಂಡಿದೆ.
ಇದನ್ನು ಓದಿ : – ರಾಜ್ಯದ ಸಾಹಿತಿಗಳು, ಬರಹಗಾರರು ಪ್ರತಿಪಕ್ಷಗಳ ನಾಯಕರುಗಳಿಗೆ ಬರುತ್ತಿರುವ ಜೀವ ಬೆದರಿಕೆ ಕರೆಗಳನ್ನು ಸರ್ಕಾರ ನಿರ್ಲಕ್ಷಿಸ ಬಾರದು – ಸಿದ್ದರಾಮಯ್ಯ