ಚಿಕ್ಕಮಗಳೂರಿ (Chikkamagaluru) ನಲ್ಲಿ ಮಳೆಯಿಂದಾಗಿ 6 ತಾಲೂಕಿನ ಶಾಲಾ-ಕಾಲೇಜು (School college) ಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ತಾಲೂಕಿಗೆ ರಜೆ ಘೋಷಣೆಯಾಗಿದೆ.
ಜುಲೈ 6-9 ರವರೆಗೆ ಶಾಲೆ, ಪ್ರೌಢ ಶಾಲೆಗೆ ರಜೆ ನೀಡಲಾಗಿತ್ತು. ಇದೀಗ ಜುಲೈ 11 ಮತ್ತು 12 ರ ವರೆಗೆ ರಜೆ ಘೋಷಣೆ ಮಾಡಿದ್ದಾರೆ. ಮಳೆ ಅಬ್ಬರ ಜೋರಾದ ಹಿನ್ನೆಲೆಯಲ್ಲಿ ಇನ್ನೆರಡು ದಿನ ಶಾಲೆಗಳಿಗೆ ರಜೆ ಮುಂದೂಡುವುದಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಆದೇಶವನ್ನು ಹೊರಡಿಸಿದ್ದಾರೆ. ಇದನ್ನೂ ಓದಿ : – ತುಂಗಾಭದ್ರ ಗ್ರಾಮದಲ್ಲಿ ಜಿಟಿಜಿಟಿ ಮಳೆಗೆ ಮನೆ ಕುಸಿತ, ಇಬ್ಬರಿಗೆ ಗಂಭೀರ ಗಾಯ
ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಹೆಚ್ಚಾಗಿರುವ ಕಾರಣ ಕಳಸ ತಾಲೂಕಿನ ಗುಳ್ಯ ಗ್ರಾಮದಲ್ಲಿ ಗ್ರಾಮಸ್ಥರೇ ನಿರ್ಮಿಸಿ ಕೊಂಡಂತಹ ಕಾಲುಸಂಕ (Quarter) ಕೊಚ್ಚಿಹೋಗುವ ಸ್ಥಿತಿಯಲ್ಲಿದೆ. ವಿದ್ಯಾರ್ಥಿ (Students) ಗಳು ಪ್ರಾಣವನ್ನ ಪಣಕ್ಕಿಟ್ಟು ಕಾಲುಸಂಕವನ್ನು ದಾಟಬೇಕಾಗಿದೆ. ದಿನನಿತ್ಯ ಓಡಾಟಕ್ಕಾಗಿ ಗ್ರಾಮಸ್ಥರೇ ಕಾಲುಸಂಕವನ್ನು ನಿರ್ಮಿಸಿಕೊಂಡಿದ್ದಾರೆ. ಮಳೆ ಹೆಚ್ಚಾದರೆ ಕಾಲು ಸಂಕವೂ ಕೊಚ್ಚಿ ಹೋಗುವ ಆತಂಕ ಎದುರಾಗಿದೆ. ಶಾಶ್ವತ ಸೇತುವೆ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : – ಚಿಕ್ಕಮಗಳೂರಿನಲ್ಲಿ ಮಳೆಯಿಂದಾಗಿ ಮನೆ ಕುಸಿತ