ಶಿಕ್ಷಣ ಸಂಸ್ಥೆ (Educational institution) ಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ (Hijab row) ಹೇರಿರುವ ಕರ್ನಾಟಕ ಸರ್ಕಾರ (Karnataka government) ದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ (HIGHCOURT)ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ (SUPREME COURT) ತೀರ್ಮಾನಿಸಿದೆ.
ವಿವಾದ ಕುರಿತ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ (Prashanth bhushan) ಸುಪ್ರೀಂ ಕೋರ್ಟ್ ನಲ್ಲಿ ಕಲಾಪ ಆರಂಭ ವೇಳೆ ನ್ಯಾಯಪೀಠದ ಗಮನಕ್ಕೆ ತಂದರು. ಕರ್ನಾಟಕದ ಹಿಜಾಬ್ ವಿವಾದ ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ಮಾರ್ಚ್ ತಿಂಗಳಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿ ಮಾಡಿದ್ರು. ಇದನ್ನು ಓದಿ : – ನಂಗೆ ಯಾವ ಉತ್ಸವನೂ ಬೇಡ – ಪಾರ್ಟಿ ಉತ್ಸವ ಬೇಕು- ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಮುಖ್ಯ ನ್ಯಾಯಮೂರ್ತಿ ರಮಣ (Raman) , ಎರಡು ನ್ಯಾಯಪೀಠಗಳು ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ನಾವು ಅರ್ಜಿಗಳ ವಿಚಾರಣೆಯನ್ನು ಮರುಹಂಚಿಕೆ ಮಾಡಬೇಕು. ಮುಂದಿನ ವಾರ ಸೂಕ್ತ ನ್ಯಾಯಪೀಠದ ಮುಂದೆ ವಿಚಾರಣೆಯನ್ನು ಕೈಗೆತ್ತಿಕೊಳ್ಳೋಣ ಎಂದು ತಿಳಿಸಿದ್ರು. ಇದನ್ನು ಓದಿ : – ಸಂಘ ಪರಿವಾರದ ಜೊತೆಗೆ ನಾಳೆ ಬಿಜೆಪಿ ನಾಯಕರ ರಹಸ್ಯ ಸಭೆ…!