ಬಜರಂಗದಳ ಕಾರ್ಯಕರ್ತ ಹಂತಕರ ಬಂಧನ: ಹಿಜಾಬ್ ವಿವಾದ ಕೊಲೆಗೆ ಕಾರಣ?

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸುವ ಮೂಲಕ ಪ್ರಕರಣದ ಎಲ್ಲಾ 5 ಆರೋಪಿಗಳನ್ನೂ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಹಿಂದೆ 7 ಮಂದಿ ಇದ್ದಾರೆಂದು ಶಂಕಿಸಲಾಗಿದ್ದು, ಖಾಸಿಫ್‌ ಹಾಗೂ ನದೀಮ್‌ ಎಂಬುವವರು ಪ್ರಮುಖ ಆರೋಪಿಗಳಾಗಿದ್ದಾರೆಂದು ತಿಳಿದುಬಂದಿದ್ದು, ಬಂಧಿತ 5 ಮಂದಿಯೂ ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ.

7 ಮಂದಿ ಕಾರು ಮತ್ತು ಆಟೋದಲ್ಲಿ ಬಂದು ಹರ್ಷನನ್ನು ಕೊಲೆ ಮಾಡಿದ್ದಾರೆ. ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ಹೆಚ್ಚಾಗಲು ಹರ್ಷ ಕಾರಣ ಎಂಬ ಹಿನ್ನೆಲೆಯಲ್ಲಿ ಖಾಸಿಫ್ ಮತ್ತು ನದೀಮ್ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು ಬಂದಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಕೊಲೆಗೆ ಹಿಜಾಬ್ ಮಾತ್ರವಲ್ಲದೇ ವೈಯಕ್ತಿಕ ದ್ವೇಷದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಇನ್ನೂ ಹಲವು ಆಯಾಮಗಳಿ ಕುರಿತು ಪೊಲೀಸರು ವಿಚಾರಣೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!