ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ( GOKARNA ) ಮಹಾಬಲೇಶ್ವರ ದೇವಸ್ಥಾನದ ಆವರಣದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿ ವಿವಾದವಾದ ಹಿನ್ನೆಲೆಯಲ್ಲಿ ಇದೀಗ ಶಿರಸಿ ಮಾರಿಕಾಂಬಾ ( MARIKAMBHA ) ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿಯಿಂದು ಆಡಳಿತ ಸಮಿತಿಗೆ ಮನವಿ ಮಾಡಿದ್ದಾರೆ.
ಹಿಂದೂ ಸಂಸ್ಕೃತಿ ಪ್ರಕಾರ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವುದಕ್ಕೆ ಮಾತ್ರ ಅವಕಾಶ ನೀಡಬೇಕು. ಅರೆಬರೆ ಬಟ್ಟೆ ಧರಿಸಿ ದೇವಸ್ಥಾನದ ಒಳಗೆ ಬರುವುದಕ್ಕೆ ಅವಕಾಶ ನೀಡಬಾರದು. ಅರೆಬರೆ ಬಟ್ಟೆ ಧರಿಸಿ ಬರುವುದರಿಂದ ದೇವಸ್ಥಾನ ಪಾವಿತ್ರ್ಯತೆಗೆ ಧಕ್ಕೆ ಬರುತ್ತದೆ. ಈ ಕಾರಣದಿಂದ ವಸ್ತ್ರಸಂಹಿತೆ ಜಾರಿ ಮಾಡುವಂತೆ ಆಡಳಿತ ಮಂಡಳಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ ಮಾಡಿದೆ.
ಇದನ್ನೂ ಓದಿ : – OTTಗೆ ಬಂತು ‘ಕಾಂತಾರ’ ಸಿನಿಮಾ – ನ.24ರಿಂದ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ