ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ – ಲಾರಿ ಚಾಲಕ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಂಭೀರ ಗಾಯ

ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ (Lorry driver) ಸ್ಥಳದಲ್ಲೇ ಸಾವನ್ನಪ್ಪಿ, ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಯರಗಟ್ಟಿ ಬಳಿ ನಡೆದಿದೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸಾವನ್ನಪ್ಪಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ (Lorry driver) ಸ್ಥಳದಲ್ಲೇ ಸಾವನ್ನಪ್ಪಿ, ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಯರಗಟ್ಟಿ ಬಳಿ ನಡೆದಿದೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಅಮರೇಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯರಗಟ್ಟಿಯ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕದಲ್ಲಿ ಲಾರಿಯನ್ನು ಸೈಡಿಗೆ ಹಾಕಿ ಲಾರಿಯಲ್ಲಿದ್ದ ಸರಕಿಗೆ ಹಗ್ಗ ಕಟ್ಟಿ ಪ್ಯಾಕ್ ಮಾಡುತ್ತಿದ್ದ ಲಾರಿ ಚಾಲಕನಿಗೆ ರಭಸವಾಗಿ ಬಂದ ಕಾರು ಗುದ್ದಿದೆ. ಸ್ಥಳದಲ್ಲೇ ಲಾರಿ ಚಾಲಕ ಮೃತಪಟ್ಟಿದ್ದಾನೆ, ಕಾರಿನಲ್ಲಿದ್ದವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದವರಾಗಿದ್ದಾರೆ. ಇದನ್ನೂ ಓದಿ :- ಭಾರತ್ ಜೋಡೋಗೆ ಯಾರು ಬಂದರೂ ನಮಗೆ ತೊಂದರೆಯಿಲ್ಲ – ಬಸವರಾಜ್ ಬೊಮ್ಮಾಯಿ

ಮಾಸಿಕ ಚೆಕ್ ಅಪ್ ಗೆ ಸ್ವಿಫ್ಟ್ ಕಾರಲ್ಲಿ ಬೆಳಗಾವಿಯ ಕೆ .ಎಲ್. ಇ ಆಸ್ಪತ್ರೆಗೆ ತಂದೆ-ಮಗ ಬರುತ್ತಿದ್ದರು. ಕಾರಿನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕಾರು ಗುದ್ದಿದೆ. ಗಾಯಗೊಂಡ ನಾಲ್ವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ :-  THAILAND- ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ ಗುಂಡಿನ ದಾಳಿ- 30 ಮಂದಿ ದಾರುಣ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!