ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ (Hospete) ಹೊರವಲಯದಲ್ಲಿರೋ ಸುರಂಗದ ಮಾರ್ಗದ ಫೋಟೋವನ್ನ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin gadkari) ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಇದರ ಜೊತೆಗೆ ಹೊಸಪೇಟೆಯ ಸುರಂಗ ಮಾರ್ಗ (Suburban tunnel) ಮೂಲಸೌಕರ್ಯಗಳ ವಿಸ್ಮಯ ಅಂತ ಹಾಡಿ ಹೊಗಳಿದ್ದಾರೆ. ಸುರಂಗ ರಸ್ತೆ ನಿರ್ಮಾ ಮಾಡಿದ ಜಾಗದಲ್ಲಿ ಅಪಾರ ಪ್ರಮಾಣದ ವನ್ಯ ಸಂಪತ್ತು ಇದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 50 ನಿರ್ಮಾಣ ಮಾಡುವ ವೇಳೆ ಪರಿಸರಕ್ಕೆ ಧಕ್ಕೆಯಾಗದ ರೀತಿ ಸುರಂಗ ಕೊರೆದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲಾಗಿದೆ. ವಿಜಯನರ ಜಿಲ್ಲೆಯ ಹೊಸಪೇಟೆ ಮಾರ್ಗವಾಗಿ ಹುನಗುಂದ ಮೂಲಕ ಚತುಷ್ಪಥ ರಸ್ತೆ ಕಾಮಗಾರಿ ಈಗಾಗಲೇ ಆರಂಭ ಆಗಿದೆ. ಇದನ್ನು ಓದಿ : – ಜನಾಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ GST ವಿನಾಯಿತಿ – ಷರತ್ತುಗಳು ಅನ್ವಯ
ಈ ಮೂಲಕ ಮಹಾರಾಷ್ಟ್ರ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸಿದಂತಾಗುತ್ತದೆ ಅಂತ ಕೇಂದ್ರ ಸಾರಿಗೆ ಸಚಿನ ನಿತಿನ್ ಗಡ್ಕರಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನು ಈ ಸುರಂಗ ಮಾರ್ಗದ ಪಕ್ಕದಲ್ಲಿಯೇ ಕಲ್ಯಾಣ ಕರ್ನಾಟಕ ಹಾಗೂ ತ್ರಿವಳಿ ರಾಜ್ಯ ಗಳ ಜೀವನಾಡಿ ತುಂಗಭದ್ರಾ ಜಲಾಶಯವಿದ್ದು ಪ್ರವಾಸಿಗರನ್ನ ತನ್ನತ್ತ ಆಕರ್ಷಿಸುತ್ತಿದೆ.
ಇದನ್ನೂ ಓದಿ : – ಬೊಮ್ಮಾಯಿ ಸಾಧನಾ ಸಮಾವೇಶಕ್ಕೆ ಪ್ರಧಾನಿ ಮೋದಿಗೆ ಆಹ್ವಾನ..!