ಕಳೆದ 3 ದಿವಸಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಸಂಪಾಜೆ ಗ್ರಾಮದಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಗೂನಡ್ಕ ದರ್ಖಾಸಿನ ಗಣೇಶ್ ಭಟ್ ಎಂಬವರ ಮನೆಗೆ ಹಾನಿಯಾಗಿದೆ. ಧರಣಿ ದಯಾನಂದ ಎಂಬವರ ಮನೆ ಜಲಾವೃತವಾಗಿದೆ.
ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ ಜ್ಯೂನಿಯರ್ ಕಾಲೇಜಿನ ಬಳಿಯೂ ಗುಡ್ಡ ಕುಸಿತ ಉಂಟಾಗಿದೆ. ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಇದನ್ನೂ ಓದಿ : – ಕೊಡಗಿನಲ್ಲಿ ಮಳೆಯ ಆರ್ಭಟ – ನಡುಗುತ್ತಿರುವ ಧರೆಯಿಂದ ಕಂಗಲಾದ ಜನತೆ
ಪಯಸ್ವಿನಿ ನದಿ ಹಾಗು ಇತರ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಪೇರಡ್ಕ ಸಂಪರ್ಕ ಕಡಿತಗೊಂಡಿದೆ. ಅಲ್ಲಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆವವು ದಿನಗಳಿಂದ ಕೊಡಗಿನ ಕೆಲ ಭಾಗದಲ್ಲಿ ಭೂ ಕಂಪನದ ಆತಂಕ ಸೃಷ್ಠಿಸಿದೆ.
ಇದನ್ನೂ ಓದಿ : – ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ – ದೆಹಲಿಗೆ ಮರಳಿದ ವಿಮಾನ