ಮೈಸೂರಿ (Mysuru) ನಲ್ಲಿ ವರದಕ್ಷಿಣೆ ದಾಹಕ್ಕೆ ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ವರದಕ್ಷಿಣೆ (Dowry) ಕಿರುಕುಳಕ್ಕೆ ಗೃಹಿಣಿ ಬಲಿಯಾದ ಘಟನೆ ಮೈಸೂರಿನ ನಂಜನಗೂಡು ತಾಲೂಕು ಹುಲ್ಲಹಳ್ಳಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪತಿ ಸೇರಿದಂತೆ ಐವರ ವಿರುದ್ದ ಹುಲ್ಲಹಳ್ಳಿ ಠಾಣೆಯಲ್ಲಿ ಎಫ್ ಐಆರ್ (FIR) ದಾಖಲಾಗಿದ್ದು, ಪೊಲೀಸರು ಗಂಡ ಹಾಗೂ ಮಾವನನ್ನು ಅರೆಸ್ಟ್ ಮಾಡಿದ್ದಾರೆ.
ಘಟನೆ ನಡೆದ 22 ದಿನಗಳ ನಂತರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮಮತಾ(20) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮೃತ ದುರ್ದೈವಿ. ಪತಿ ಪ್ರೇಮಚಂದ್ರ ನಾಯಕ ಹಾಗೂ ಮಾವ ಶಂಕರನಾಯಕ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. 2021 ಮಾರ್ಚ್ ನಲ್ಲಿ ಮಮತಾ ಹಾಗೂ ಪ್ರೇಮಚಂದ್ರನಾಯಕ ವಿವಾಹವಾಗಿತ್ತು. ಮದುವೆ ಸಂದರ್ಭದಲ್ಲಿ 30 ಗ್ರಾಂ ಚಿನ್ನ, 80 ಸಾವಿರ ನಗದು ವರದಕ್ಷಿಣೆಯಾಗಿ ನೀಡಿ ಅದ್ದೂರಿಯಿಂದ ಮದುವೆ ಮಾಡಿಕೊಡಲಾಗಿತ್ತು. ನಂತರದ ದಿನಗಳಲ್ಲಿ ವರದಕ್ಷಿಣೆ ವಿಚಾರದಲ್ಲಿ ಕ್ಯಾತೆ ತೆಗೆದ ಅಳೀಮಯ್ಯ ಮಮತಾ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದನು.ಇದಕ್ಕೆ ಮನೆಯವರ ಕುಮ್ಮಕ್ಕೂ ಇತ್ತು. ಗರ್ಭಿಣಿ ಆಗಿದ್ದ ಸಂದರ್ಭದಲ್ಲಿ ಗರ್ಭಪಾತ ಮಾಡಿಸಿ ಅಟ್ಟಹಾಸ ಮೆರೆದಿದ್ರು. ಹೀಗಿದ್ದೂ ಕಿರುಕುಳ ನೀಡುತ್ತಿದ್ದ ಕಾರಣ ಮಗಳನ್ನ ಹೆತ್ತವರು ಮನೆಗೆ ಕರೆತಂದಿದ್ರು. ಇದನ್ನು ಓದಿ :- 18 ತಿಂಗಳುಗಳ ಕಾಲ ಕೋಮಾದಲ್ಲಿದ್ದಾನೆಂದು ಮನೆಯಲ್ಲೇ ಶವ ಇಟ್ಟುಕೊಂಡಿದ್ದ ಕುಟುಂಬ
. ಈ ಮಧ್ಯೆ ತನ್ನ ತಪ್ಪಿನ ಅರಿವಾಗಿದೆ ಎಂದು ಕಾರಣ ನೀಡಿದ ಅಳೀಮಯ್ಯ ಅತ್ತೆ ಮನೆ ಸೇರಿಕೊಂಡ. ಕಳೆದ ತಿಂಗಳು ಗೌರಿಗಣೇಶ ಹಬ್ಬದ ದಿನ ಮಮತ ನೇಣಿನ ಕುಣಿಕೆಯಲ್ಲಿ ಕಾಣಿಸಿಕೊಂಡಳು. ಮಮತ ಸಾವನ್ನಪ್ಪಿದ ಮರುಕ್ಷಣವೇ ಪ್ರೇಮಚಂದ್ರನಾಯಕ್ ಎಸ್ಕೇಪ್ ಆದ. ಮಗಳನ್ನ ಪತಿ ಪ್ರೇಮಚಂದ್ರನಾಯಕ ಕೊಲೆ ಮಾಡಿದ್ದಾನೆ. ಕೃತ್ಯಕ್ಕೆ ಮನೆಯವರು ಕುಮ್ಮಕ್ಕು ನೀಡಿದ್ದಾರೆಂದು ಮಮತಾ ತಾಯಿ ಭಾಗ್ಯ ತಡವಾಗಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿ :- ರಾಹುಲ್ ಗಾಂಧಿ ಗೆ ರಾಷ್ಟ್ರೀಯ ಅಧ್ಯಕ್ಷ ಆಗಲು ಮನಸ್ಸಿಲ್ಲ – ಜಗದೀಶ್ ಶೆಟ್ಟರ್