ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರೆಂಟಿ ಎಂದು ಸಂಸದ ಪ್ರತಾಪ ಸಿಂಹ ( PRATHAP SIMHA ) ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್ ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ ಹೇಳಿದ್ದೇನೆ. 3-4 ಟೈಮ್ ಕೊಟ್ಟಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಹೇಳಿದ್ರು. ಇದನ್ನೂ ಓದಿ : – ಶಾಲಾ ಸಮಸ್ಯೆ ಬಗೆಹರಿಸೋದು ಬಿಟ್ಟು ಪೇಂಟ್ ಬಳಿತಾರಂತೆ – ಸಲೀಂ ಅಹಮ್ಮದ್
ಟಿಪ್ಪು ನಿಜ ಕನಸು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಪ್ಪು ದೇಶ ಪ್ರೇಮಿಯೂ ಅಲ್ಲ. ಮೈಸೂರಿಗೆ ಟಿಪ್ಪುವಿನ ಕೊಡುಗೆ ಸೊನ್ನೆ. ಹೈದರಾಲಿ ಮತ್ತು ಟಿಪ್ಪುಸುಲ್ತಾನ್ ವೀರನೂ ಅಲ್ಲ ಶೂರನೂ ಅಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಟಿಪ್ಪುವಿನ ಪಾತ್ರ ಏನೂ ಇಲ್ಲ ನಿಜಲಿಂಗಪ್ಪನವರ ಕಾರ್ ಡ್ರೈವರ್ ಆಗಿದ್ದ ಜಾಫರ್ ಶರೀಫ್ ಎಂಬ ವ್ಯಕ್ತಿ ರೈಲಿಗೆ ಟಿಪ್ಪು Express ಎಂದು ನಾಮಕರಣ ಮಾಡಿದರು. ಕಳ್ಳ ಕಿವಿ ಇಟ್ಟುಕೊಂಡು ಇಂದಿರಾಗಾಂಧಿ ಬಳಿ ಹೋಗಿ ಮಾಹಿತಿ ಕೊಟ್ಟು ಲೋಕಸಭಾ ಚುನಾವಣೆಗೆ ಟಿಕೆಟ್ ಗಿಟ್ಟಿಸಿಕೊಂಡು ಗೆದ್ದು ರೈಲ್ವೆ ಸಚಿವರಾದರು. 1980ರಲ್ಲಿ ಟಿಪ್ಪು ಎಕ್ಸ್ ಪ್ರೆಸ್ ಪ್ರಾರಂಭ ಮಾಡುತ್ತಾರೆ ಎಂದ ಅವರು, ರೈಲ್ವೆ ಸ್ಟೇಷನ್ ಗೆ ಚಾಮರಾಜ ಒಡೆಯರ್ ಹೆಸರು ಇಡುತ್ತೇವೆ ಹೊರತು ಟಿಪ್ಪುವಿನ ಯಾವ ಗುರುತುಗಳು ಸಿಗದ ಹಾಗೇ ಮಾಡುತ್ತೇವೆ ಎಂದರು.
ಇದನ್ನೂ ಓದಿ : – ಎಲ್ಲದರಲ್ಲೂ ರಾಜಕಾರಣ ಮಾಡುವಂತದ್ದು ಸರಿಯಲ್ಲ – ಸಿಎಂ ಬೊಮ್ಮಾಯಿ