ಸಿಐಡಿ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ಇಂದು ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್ಪಿನ್ ಆರ್.ಡಿ.ಪಾಟೀಲ್ನನ್ನು( R.D.PATIL ) ಕೇಂದ್ರ ಕಾರಾಗೃಹ ಸುಪರ್ದಿಗೆ ಒಪ್ಪಿಸಲಾಗಿದೆ. ಜೈಲಿಗೆ ಹೋಗುವ ಮುನ್ನ ಮಾಧ್ಯಮಕ್ಕೆ ಕೈಮುಗಿದು ನಾನು ಒಳ್ಳೆಯದನ್ನೂ ಮಾಡಿದ್ದೀನಿ.
![](https://rajnewskannada.in/wp-content/uploads/2022/05/WhatsApp-Image-2022-05-08-at-3.17.08-PM3-1024x768.jpeg)
ಅದನ್ನೂ ಒಂದಿಷ್ಟು ತೋರಿಸಿ ಅಂತ ಕೇಳಿಕೊಂಡು ಜೈಲಿಗೆ ಹೋಗಿದ್ದಾನೆ. ಚೌಕ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಸಂಬಂಧಿಸಿದಂತೆ ಆರ್.ಡಿ.ಪಾಟೀಲ್ನನ್ನು ಸಿಐಡಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.
![](https://rajnewskannada.in/wp-content/uploads/2022/05/WhatsApp-Image-2022-05-08-at-3.17.08-PM4-1024x768.jpeg)
ಸಿಐಡಿ ಕಸ್ಟಡಿ ಕಾಲಾವಕಾಶ ಅಂತ್ಯವಾದ ಹಿನ್ನಲೆ ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗೆ ಕಳುಹಿಸಲಾಗಿದೆ.ನಂತರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಸಂಬಂಧ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ : – ಕಾಂಗ್ರೆಸ್ ನವರಿಗೆ ಪಕ್ಷ ಕಟ್ಟಲು ಗೊತ್ತಿಲ್ಲ..ಇನ್ನು ನಾಡನ್ನು ಏನ್ ಕಟ್ತಾರೆ? – ನಳೀನ್ ಕುಮಾರ್ ಕಟೀಲ್