ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ – ನಾಲ್ಕು ಆರೋಪಗಳ ತನಿಖೆಗೆ ಸರ್ಕಾರ ಆದೇಶ

ಮೈಸೂರು ಜಿಲ್ಲಾಧಿಕಾರಿಯಾಗಿ ವಿವಾದಕ್ಕೆ ಗುರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿರುದ್ಧ ಕೇಳಿ ಬಂದಿರುವ ಆರೋಪ ಕುರಿತು ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ.

Who Is Rohini Sindhuri? Know Why The Mysuru Deputy Commissioner Accused Of  Harassment


ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ನಾಲ್ಕು ಆರೋಪ ಕೇಳಿ ಬಂದಿದ್ದವು. ನಾಲ್ಕು ಆರೋಪಗಳ ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಮ್ ಅವರನ್ನು ನೇಮಿಸಿದ್ದು, 30 ದಿನದಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ :- ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಬದ್ಧ – ಸಿಎಂ ಬೊಮ್ಮಾಯಿ ಸ್ಪಷ್ಟನೆ

ಸಿಂಧೂರಿ ವಿರುದ್ಧ ಕೇಳಿ ಬಂದ ಆರೋಪಗಳು

ಪ್ರಸ್ತು ಮುಜರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಭಾರೀ ವಿವಾದಗಳಿಗೆ ಗುರಿಯಾಗಿದ್ದರು. ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಹಣ ಕೊಟ್ಟು ಪರಿಸರ ಸ್ನೇಹಿ ಬ್ಯಾಗ್ ಖರೀದಿ ಮಾಡಿದ್ದಾರೆ ಎಂಬುದು ಅವರ ಮೇಲಿರುವ ಮೊದಲ ಆರೋಪ.

Twitter users extend support to IAS officer Rohini Sindhuri; Calls for  staying transfer order


ಜಿಲ್ಲಾಧಿಕಾರಿಗಳ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚ ಮಾಡಿ ಅನಧಿಕೃತ ಈಜುಕೊಳ ಮತ್ತು ಜಿಮ್ ನಿರ್ಮಿಸಿದ್ದಾರೆ ಎಂಬುದು ಎರಡನೇ ಆರೋಪ. ಕೋವಿಡ್ ಸಂದರ್ಭದಲ್ಲಿ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿದ್ದು, ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳಿಗೆ ಸಿಂಧೂರಿ ನಿರ್ಧಾರ ಕಾರಣ

 ಇದನ್ನೂ ಓದಿ :-  ಮಕ್ಕಳಿಗೆ ಎಡಪಂಥ ಬಲಪಂಥ ಎನ್ನುವುದಕ್ಕಿಂತ ದೇಶ ಮುಖ್ಯ – ಸಿದ್ದರಾಮಯ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!